ಉಡುಪಿ ಪರ್ಯಾಯದಲ್ಲಿ ತೇಜಸ್ವಿ ವಿರುದ್ಧ ಪೇಜಾರಶ್ರೀ ಅಪಸ್ವರ
ಉಡುಪಿ : ವಿಶ್ವ ಪ್ರಸಿದ್ಧ ಉಡುಪಿಯ ಕೃಷ್ಣಮಠದಲ್ಲಿ ನಡೆದ ಪರ್ಯಾಯ ಮಹೋತ್ಸವದಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಶ್ರೀಕೃಷ್ಣ ಮಠದ ಅಧಿಕಾರ ಸ್ವೀಕರಿಸಿದರು. ಇದರೊಂದಿಗೆ ಎರಡು ವರ್ಷಗಳ ಕಾಲ ಶ್ರೀಕೃಷ್ಣನನ್ನು ಪೂಜಿಸುವ ಅವಕಾಶ ಸ್ವಾಮೀಜಿ ಅವರಿಗೆ ದೊರೆತಂತಾಗಿದೆ.
47 ವರ್ಷ ವಯಸ್ಸಿನ ಅದಮಾರು ಮಠಾಧೀಶರು ಪರ್ಯಾಯ ಪೀಠ ಆರೋಹಿಸಿದ (ಜ.18, ಭಾನುವಾರ) ನಂತರ- ಮುಂದಿನ ಎರಡು ವರ್ಷಗಳ ಕಾಲ ಕೃಷ್ಣಮಠದ ಆಡಳಿತ ಹಾಗೂ ಕೃಷ್ಣನ ಪೂಜೆ ನಡೆಸುವರು. ಕಳೆದೆರಡು ಪರ್ಯಾಯಗಳ ಅವಧಿಯಲ್ಲಿ ಪೇಜಾವರ ಮತ್ತು ಫಲಿಮಾರು ಮಠಾಧೀಶರು ಹಾಕಿಕೊಟ್ಟ ಪರಿಮಳದ ಪಂಕ್ತಿಯಲ್ಲಿ ತಾವು ಸಾಗುವುದಾಗಿ ಪೀಠಾರೋಹಣದ ನಂತರ ಅದಮಾರು ಮಠಾಧೀಶರು ಹೇಳಿದರು.
ಸಾವಿರಾರು ಭಕ್ತರು ಜಮಾಯಿಸಿದ್ದ ಪರ್ಯಾಯ ಮಹೋತ್ಸವ ವೈಭವದಿಂದ ನಡೆಯಿತು. ಶನಿವಾರ ಮಧ್ಯರಾತ್ರಿಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿದ್ದವು.
ಮಧ್ವರ ಕುರಿತು ಅಪಸ್ವರ : ಪರ್ಯಾಯ ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಭಾಗವಹಿಸಿದ್ದರು. ನಾಡಗೀತೆಯ ವಿವಾದವನ್ನು ಪ್ರಸ್ತಾಪಿಸಿದ ವಿಶ್ವೇಶತೀರ್ಥರು- ಜಾತ್ಯತೀತರು ಎಂದುಕೊಳ್ಳುತ್ತಿರುವ ಕೆಲವು ಮಂದಿ ಹಾಗೂ ಬುದ್ಧಿಜೀವಿಗಳ ಹೆಸರಿನ ಕೆಲವರು ವಿನಾ ಕಾರಣ ವಿವಾದವನ್ನು ಸೃಷ್ಟಿಸಿ ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ಹೊರಟಿದ್ದಾರೆ ಎಂದು ಆಪಾದಿಸಿದರು.
ಮಹಾನ್ ಮಾನವತಾವಾದಿ ಮಧ್ವರನ್ನು ಈ ನಾಡಿನ ಖ್ಯಾತ ಸಾಹಿತಿಯಾಬ್ಬರು ತಪ್ಪಾಗಿ ಅರ್ಥೈಸುತ್ತಿದ್ದಾರೆ ಎಂದು ವಿಶ್ವೇಶತೀರ್ಥ ಸ್ವಾಮೀಜಿ ವಿಷಾದಿಸಿದರು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications