ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಇತರ ವಿಷಯಗಳ ಬದಿಗೊತ್ತಿ , ಕುಡಿಯುವ ನೀರಿಗೆ ಗಮನ ಹರಿಸಿ’

By Staff
|
Google Oneindia Kannada News

‘ಇತರ ವಿಷಯಗಳ ಬದಿಗೊತ್ತಿ , ಕುಡಿಯುವ ನೀರಿಗೆ ಗಮನ ಹರಿಸಿ’
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕೃಷ್ಣ ನಕಾರ

ಬೆಂಗಳೂರು : ಇತರ ಎಲ್ಲ ವಿಷಯಗಳನ್ನು ಬದಿಗೊತ್ತಿ - ಕುಡಿಯುವ ನೀರು, ವಿದ್ಯುತ್‌ ಪೂರೈಕೆ, ದನಕರುಗಳಿಗೆ ಮೇವು ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವಂಥ ಕಾರ್ಯಕ್ರಮಗಳಿಗೆ ಮೊದಲ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ರಾಜ್ಯದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಜ.20ರ ಮಂಗಳವಾರ ನಡೆದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೃಷ್ಣ , ಮುಂಬರುವ ಬೇಸಿಗೆಯಲ್ಲಿ ಜನತೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಜಿಲ್ಲಾಧಿಕಾರಿಗಳು ವಾರಕ್ಕೊಮ್ಮೆ ತಮ್ಮ ಜಿಲ್ಲೆಯ ನೀರಿನ ವ್ಯವಸ್ಥೆಯ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ನೀರಿನ ವ್ಯವಸ್ಥೆ, ವಿದ್ಯುತ್‌ ಪೂರೈಕೆ, ದನಕರುಗಳಿಗೆ ಗೋಮಾಳಗಳು ಮತ್ತು ಯುವ ಪೀಳಿಗೆಗೆ ಉದ್ಯೋಗ ಕಲ್ಪಿಸುವ ಕಾರ್ಯಗಳಿಗೆ ಮುಂದಿನ ಮೂರು ತಿಂಗಳು ಪ್ರಾಧಾನ್ಯತೆ ನೀಡಬೇಕು. ಉಳಿದ ಕಾರ್ಯಗಳು ನಿಧಾನವಾದರೂ ಅಡ್ಡಿಯಿಲ್ಲ. ಜನರು ಮೊದಲು ತೃಪ್ತರಾಗಬೇಕು ಎಂದು ಕೃಷ್ಣ ಹೇಳಿದರು.

ತಮಿಳುನಾಡಿಗೆ ನೀರು ಹರಿಸಲು ನಕಾರ

ಏಳು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮುಂದಿಟ್ಟಿರುವ ಮನವಿಯನ್ನು ಮುಖ್ಯಮಂತ್ರಿ ಕೃಷ್ಣ ತಿರಸ್ಕರಿಸಿದ್ದಾರೆ. ರಾಜ್ಯದ ಜನತೆಯ ಕುಡಿಯುವ ನೀರಿನ ಅಗತ್ಯ ಕಾವೇರಿ ನೀರಿನಲ್ಲೇ ಪೂರೈಕೆಯಾಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದು ಆಗದ ಮಾತು ಎಂದು ಕೃಷ್ಣ ಹೇಳಿದರು.

(ಪಿಟಿಐ)

ಮುಖಪುಟ / ಕೃಷ್ಣಗಾರುಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X