ಶ್ರೀರಂಗಂನಲ್ಲಿ ಬೆಂಕಿ ಅವಘಡ, ಮದುವೆ ಮನೇಲಿ ಕನಿಷ್ಠ 45 ಸಾವು
ಶ್ರೀರಂಗಂನಲ್ಲಿ ಬೆಂಕಿ ಅವಘಡ, ಮದುವೆ ಮನೇಲಿ ಕನಿಷ್ಠ 45 ಸಾವು
ಸೂತಕದ ಮನೆಯಾದ ಮದುವೆ ಮನೆ, 45 ಸಾವು, ವಧು ಸೇರಿದಂತೆ 50 ಮಂದಿಗೆ ಗಾಯ
ಅಲಂಕಾರಿಕ ದೀಪ (ಸೀರಿಯಲ್ ಸೆಟ್)ನಲ್ಲಿ ಉಂಟಾದ ಷಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಮೊದಲ ಮಹಡಿಯಲ್ಲಿ ಬೆಂಕಿಯ ಕಿಡಿ ಮೊದಲು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮದುವೆ ಮನೆಯನ್ನು ವ್ಯಾಪಿಸಿದೆ. ಮುಹೂರ್ತಕ್ಕೆ ಸಿದ್ಧರಾಗುತ್ತಿದ್ದ ಜನರು ಉಸಿರುಗಟ್ಟಿ ಸಾವಿಗೀಡಾದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 9.30ರಿಂದ 10.30ಕ್ಕೆ ಮದುವೆಯ ಮುಹೂರ್ತವಿದ್ದು, ಮುಹೂರ್ತಕ್ಕೆ ಸ್ವಲ್ಪ ಸಮಯ ಮುನ್ನ ಸಾವುನೋವು ಸಂಭವಿಸಿದೆ. ಬೆಂಕಿ ಹತ್ತಿಕೊಂಡ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಕಾಲ್ತುಳಿತದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಂಗಳಸೂತ್ರವನ್ನು ಬಿಗಿಸಿಕೊಳ್ಳುವ ಸಂಭ್ರಮದಲ್ಲಿದ್ದ ವಧು ಜಯಶ್ರೀ ಕೂಡ ನೂಕುನುಗ್ಗಲಿಗೆ ಸಿಕ್ಕಿದ್ದು , ಆಕೆಯನ್ನು ಸಂಬಂಧಿಕನೊಬ್ಬ ಅಪಾಯದಿಂದ ಪಾರು ಮಾಡಿದ್ದಾನೆ. ಜಯಶ್ರೀ ತಂದೆ ರೈಲ್ವೆ ಇಲಾಖೆಯ ನಿವೃತ್ತ ನೌಕರರು.
ತೀವ್ರವಾಗಿ ಗಾಯಗೊಂಡವರನ್ನು ತಿರುಚನಾಪಳ್ಳಿ ಮತ್ತು ಶ್ರೀರಂಗಂನಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ದುರ್ಘಟನೆಯ ಸ್ಥಳಕ್ಕೆ ಪಿಟಿಐ ಪ್ರತಿನಿಧಿ ಭೇಟಿ ಕೊಟ್ಟಾಗ ಕಂಡ ದೃಶ್ಯಗಳು : ಮದುವೆಯ ಮಂಗಳ ವಸ್ತುಗಳು ದಿಕ್ಕಾಪಾಲಾಗಿದ್ದವು. ಚೆಲ್ಲಾಪಿಲ್ಲಿಯಾಗಿದ್ದ ಹೆಣಗಳನ್ನು ಒಂದೆಡೆ ಒಟ್ಟಲಾಗುತ್ತಿತ್ತು . ಮದುವೆಯ ಹಾಲ್ ತುಂಬ ಕುರ್ಚಿಗಳು ಚೆಲ್ಲಾಡಿದ್ದವು. ಮೊದಲ ಮಹಡಿ ಸಂಪೂರ್ಣವಾಗಿ ಮತ್ತು ಕೆಳ ಅಂತಸ್ತಿನ ಕಿಟಕಿಗಳು ಬೆಂಕಿಯಿಂದ ಹಾನಿಗೊಳಗಾಗಿದ್ದವು. ಮದುವೆ ಮನೆ ಸೂತಕದ ಮನೆಯಾಗಿತ್ತು .
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications