ವೀರಪ್ಪನ್ಗೆ ಅಂತ್ಯ ಕಾಣಿಸಲು ರಾಜ್ಯಪಾಲ ಚತುರ್ವೇದಿ ಒತ್ತಾಯ
ವೀರಪ್ಪನ್ಗೆ ಅಂತ್ಯ ಕಾಣಿಸಲು ರಾಜ್ಯಪಾಲ ಚತುರ್ವೇದಿ ಒತ್ತಾಯ
ಉತ್ತಮ ಸೇವೆಯ ಮೂಲಕ ಜನರ ನಂಬಿಕೆ ಗಳಿಸಲು ಪೊಲೀಸರಿಗೆ ಕರೆ
ರಾಜ್ಯ ಹಾಗೂ ನೆರೆ ರಾಜ್ಯಗಳ ಗಡಿಯಲ್ಲಿನ ಅರಣ್ಯಗಳಲ್ಲಿ ಕಾಡುಗಳ್ಳನ ಹಾವಳಿ ಮುಂದುವರಿದೆ. ಈ ಪ್ರಕರಣಕ್ಕೆ ತಡೆ ಹಾಕಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯಪಾಲ ಚತುರ್ವೇದಿ ತಮ್ಮ ಗಣರಾಜ್ಯೋತ್ಸವ ಭಾಷಣದಲ್ಲಿ (ಜ.26, ಸೋಮವಾರ) ಹೇಳಿದರು.
ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಸಹಕಾರ ಮನೋಭಾವ ಉಂಟಾಗಬೇಕು. ಗುಪ್ತಚರ ವಿಭಾಗವನ್ನು ಬಲಗೊಳಿಸಬೇಕು. ಈ ಮೂಲಕ ರಾಜ್ಯದ ಜನತೆಯ ವಿಶ್ವಾಸ ಗಳಿಸಬೇಕು ಎಂದು ಚತುರ್ವೇದಿ ಹೇಳಿದರು.
ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯದ ಪೊಲೀಸರು ಉತ್ತಮ ಸಾಮರ್ಥ್ಯ ತೋರಿದ್ದಾರೆ ಎಂದು ರಾಜ್ಯಪಾಲ ಚತುರ್ವೇದಿ ಶ್ಲಾಘಿಸಿದರು.
ಮುಂಬರುವ ಲೋಕಸಭಾ ಹಾಗೂ ವಿಧಾನಸಭೆ ಚುನಾವಣೆಗಳ ಪಾರದರ್ಶಕತೆ ಕುರಿತು ಜನರಲ್ಲಿ ನಂಬಿಕೆ ಮೂಡಿಸುವ ಕೆಲಸಗಳನ್ನು ಸರ್ಕಾರ ಮಾಡಬೇಕಿದೆ ಎಂದು ರಾಜ್ಯಪಾಲರು ಹೇಳಿದರು.
ಪ್ರವಾಸೋದ್ಯಮಕ್ಕೆ ಒತ್ತು , ಬೆಂಗಳೂರಿಗೆ ಮೆಟ್ರೋ
ರಾಜ್ಯದಲ್ಲಿನ ಪ್ರವಾಸೋದ್ಯಮದ ಅವಕಾಶಗಳನ್ನು ಉಪಯೋಗಿಸಿಕೊಳ್ಳಲು ಹೆಚ್ಚು ಕ್ರಿಯಾಶೀಲರಾಗಬೇಕು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದ್ದು , ಈ ಸಮಸ್ಯೆಗೆ ಮೆಟ್ರೋ ರೈಲು ಮದ್ದಾಗಬಲ್ಲದು ಎಂದು ಚತುರ್ವೇದಿ ಅಭಿಪ್ರಾಯಪಟ್ಟರು.
ಕಳೆದ ಮೂರು ವರ್ಷಗಳಿಂದಲೂ ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ದೊಡ್ಡ ಸವಾಲು ಸರ್ಕಾರದ ಮುಂದಿದೆ ಎಂದು ಚತುರ್ವೇದಿ ತಮ್ಮ ಭಾಷಣದಲ್ಲಿ ತಿಳಿಸಿದರು.
ನೂರಾರು ಶಾಲಾ ಮಕ್ಕಳು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಟುವಟಿಕೆ ನಡೆಸಿಕೊಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಶಾಲಾ ಮಕ್ಕಳೊಂದಿಗೆ, ಭಾರತೀಯ ವಾಯುದಳ, ಸಿಆರ್ಪಿಎಫ್, ಅಗ್ನಿಶಾಮಕ ದಳ ಹಾಗೂ ಎನ್ಸಿಸಿ ಕೆಡೆಟ್ಗಳು ಆಕರ್ಷಕ ಪೆರೇಡ್ನಲ್ಲಿ ಭಾಗವಹಿಸಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications