ಲೇಖಕಿಯರಸಂಘದ ಬೆಳ್ಳಿಹಬ್ಬ ಸಂಭ್ರಮಕ್ಕೆ ಲೇಖಕಿ.ಕಾಂ ಮೆರುಗು
ಲೇಖಕಿಯರಸಂಘದ ಬೆಳ್ಳಿಹಬ್ಬ ಸಂಭ್ರಮಕ್ಕೆ ಲೇಖಕಿ.ಕಾಂ ಮೆರುಗು
ಶೇಷಗಿರಿರಾವ್, ನಾರಾಯಣ, ಶ್ರೀನಿವಾಸರಾಜು ಮುಂತಾದ ಗಣ್ಯರಿಗೆ ಸನ್ಮಾನ
ಸಾಹಿತ್ಯದಿಂದ ಸಮಾಜ ಸುಧಾರಣೆ ಸಾಧ್ಯವೇ ಎಂದು ಚಿಂತಿಸುವ ಮೂಲಕ ಲೇಖಕಿಯರು ಸಾಹಿತ್ಯ ರಚನೆಯಲ್ಲಿ ತೊಡಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಿ.ನಾರಾಯಣ ಹೇಳಿದರು. ಅವರು ಲೇಖಕಿಯರ ಸಂಘದ ಬೆಳ್ಳಿಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಿ (ಜ.26) ಮಾತನಾಡಿದರು.
ವರದಕ್ಷಿಣೆಯನ್ನು ನಿರ್ಮೂಲನೆ ಮಾಡುವ, ಕೆಳಸ್ತರದವರನ್ನು ಮೇಲೆತ್ತುವ ಹಾಗೂ ಎಲ್ಲ ಹಂತಗಳಲ್ಲಿಯೂ ಭ್ರಷ್ಟಾಚಾರವನ್ನು ನಾಶಗೊಳಿಸುವ ಕಾರ್ಯದಲ್ಲಿ ಮಹಿಳೆಯರೂ ತೊಡಗಬೇಕಿದೆ. ಈ ನಿಟ್ಟಿನಲ್ಲಿ ಲೇಖಕಿಯರ ಪಾತ್ರ ಮಹತ್ವವಾದುದು ಎಂದು ನಾರಾಯಣ ಅಭಿಪ್ರಾಯಪಟ್ಟರು. ಪುಟ್ಟ ಮಕ್ಕಳ ಮೇಲಿರುವ ಓದಿನ ಹೊರೆಯನ್ನು ತಪ್ಪಿಸಬೇಕೆಂದು ನಾರಾಯಣ ಸರ್ಕಾರವನ್ನು ಕೋರಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ www.lekhaki.com ವೆಬ್ಸೈಟ್ ಅನಾವರಣಗೊಳಿಸಿದರು. ಲೇಖಕಿಯರ ಸಂಘಕ್ಕೆ ಸರ್ಕಾರದಿಂದ ನೆರವು ಒದಗಿಸುವ ಕುರಿತು ಸಚಿವೆ ಆಶ್ವಾಸನೆ ನೀಡಿದರು.
ಹಿರಿಯ ಲೇಖಕ ಪ್ರೊ.ಜಿ.ವೆಂಕಟಸುಬ್ಬಯ್ಯ ಲೇಖಕಿಯರ ಸಂಘದ ಬೆಳ್ಳಿಹಬ್ಬದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಮೂಡಬಿದರೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಕಮಲಾ ಹಂಪನಾ, ಲೇಖಕಿಯರ ಸಂಘದ ಉಷಾ ಪಿ.ರೈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಇದೇ ಸಂದರ್ಭದಲ್ಲಿ , ಲೇಖಕಿಯರ ಸಂಘದ ಅಭಿವೃದ್ಧಿಗಾಗಿ ಶ್ರಮಿಸಿದ ಜಿ.ನಾರಾಯಣ, ಎಲ್.ಎಸ್.ಶೇಷಗಿರಿರಾವ್, ಚಿ.ಶ್ರೀನಿವಾಸರಾಜು, ಡಾ.ವಿಜಯಾ, ಟಿ.ಸುನಂದಮ್ಮ , ಎಚ್.ಎಸ್.ಪಾರ್ವತಿ, ಹೇಮಲತಾ ಮಹಿಷಿ, ನಾಗಮಣಿ ಎಸ್.ರಾವ್, ಶಶಿಕಲಾ ವೀರಯ್ಯ ವೀರಯ್ಯಸ್ವಾಮಿ, ಉಷಾ ರೈ ಅವರನ್ನು ಸನ್ಮಾನಿಸಲಾಯಿತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications