ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ
ವಿಮಾನ ನಿಲ್ದಾಣಕ್ಕೆ ದೇಶದ ಹೆಬ್ಬಾಗಿಲು ಎನ್ನುವ ಖ್ಯಾತಿ- ಕೃಷ್ಣ ವಿಶ್ವಾಸ
2006ರೊಳಗೆ ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯವಾಗುವುದೆಂದು ನಿರೀಕ್ಷಿಸಲಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಆರು ಪಥಗಳ ರಸ್ತೆ ನಿರ್ಮಿಸಲಾಗುವುದು. ಬೆಂಗಳೂರಿನಿಂದ ದೇವನಹಳ್ಳಿಗೆ ರೈಲು ಮಾರ್ಗ ನಿರ್ಮಿಸುವ ಕುರಿತು ಚಿಂತಿಸಲಾಗುತ್ತಿದೆ ಎಂದು ಶಂಕುಸ್ಥಾಪನೆ ನೆರವೇರಿಸಿದ ನಂತರ (ಜ.29ರ ಗುರುವಾರ ) ಮಾತನಾಡಿದ ಮುಖ್ಯಮಂತ್ರಿ ಕೃಷ್ಣ ತಿಳಿಸಿದರು.
ಅಂದಾಜು 1260 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣ, ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ದೇಶದ ಮೊಟ್ಟಮೊದಲ ವಿಮಾನ ನಿಲ್ದಾಣ ಎನ್ನಿಸಿಕೊಂಡಿದೆ.
ವಿಮಾನ ನಿಲ್ದಾಣ ಕಾಮಗಾರಿ ಯೋಜನೆ ಆರಂಭಕ್ಕೆ ಸಹಕರಿಸಿದ ಪ್ರಧಾನಿ ವಾಜಪೇಯಿ ಹಾಗೂ ಇತರ ಕೇಂದ್ರ ಸಚಿವರ ಪ್ರೋತ್ಸಾಹವನ್ನು ಕೃಷ್ಣ ಪ್ರಶಂಸಿಸಿದರು. ವಿಮಾನ ನಿಲ್ದಾಣ ಕಾಮಗಾರಿ ವೇಗವಾಗಿ ನಡೆಯಲಿದ್ದು , ಈ ವೇಗಕ್ಕೆ ಯಾವುದೂ ಅಡ್ಡಿಯಾಗದು ಎಂದು ಕೃಷ್ಣ ಹೇಳಿದರು.
4300 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಸಿದ್ಧಗೊಳ್ಳಲಿದೆ. ಕಾಮಗಾರಿ ಮುಕ್ತಾಯದ ನಂತರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದೇಶದ ಹೆಬ್ಬಾಗಿಲು ಎನ್ನುವ ಖ್ಯಾತಿ ಹೊಂದಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಲಾ ಶೇ.13ರಷ್ಟು ಷೇರನ್ನು, ಮತ್ತು ಖಾಸಗಿ ವಲಯ ಶೇ.74ರ ಪಾಲನ್ನು ವಿಮಾನ ನಿಲ್ದಾಣ ಕಾಮಗಾರಿ ವೆಚ್ಚದಲ್ಲಿ ಭರಿಸಲಿವೆ. ಖಾಸಗಿ ಬಂಡವಾಳವಾದ ಶೇ.74 ರಲ್ಲಿ - ಸೀಮನ್ಸ್ ಶೇ.40, ಲಾರ್ಸನ್ ಅಂಡ್ ಟರ್ಬೊ ಶೇ.17 ಮತ್ತು ಝಯೂರಿಚ್ ಏರ್ಫೋರ್ಟ್ ಶೇ.17ರಷ್ಟನ್ನು ಭರಿಸಲಿವೆ.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications