ರಾಜ್ಯದಲ್ಲಿ ಮಕ್ಕಳ ಅಕಾಡೆಮಿ ಸ್ಥಾಪನೆಗೆ ಸರ್ಕಾರದ ಆಸಕ್ತಿ -ಖರ್ಗೆ
ರಾಜ್ಯದಲ್ಲಿ ಮಕ್ಕಳ ಅಕಾಡೆಮಿ ಸ್ಥಾಪನೆಗೆ ಸರ್ಕಾರದ ಆಸಕ್ತಿ -ಖರ್ಗೆ
ಗುಲ್ಬರ್ಗಾದಲ್ಲಿ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ
ಸಾಹಿತ್ಯ ಅಕಾಡೆಮಿ, ಕೊಡವ ಅಕಾಡೆಮಿ, ಯಕ್ಷಗಾನ ಮತ್ತು ಜಾನಪದ ಅಕಾಡೆಮಿ, ತುಳು ಅಕಾಡೆಮಿ, ಮುಂತಾದ ಅಕಾಡೆಮಿಗಳು ರಾಜ್ಯದಲ್ಲಿವೆ. ಆದರೆ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲಿಕ್ಕೋಸುಗ ಪ್ರತ್ಯೆಕವಾದ ಅಕಾಡೆಮಿಯಾಂದಿಲ್ಲ . ಈ ಕೊರತೆಯನ್ನು ನೀಗಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಅವರು ಗುಲ್ಬರ್ಗಾದಲ್ಲಿ ಸೋಮವಾರ ಪ್ರಾರಂಭವಾದ ಮಕ್ಕಳ ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಮಾಜ, ಸಂಸ್ಕೃತಿ ಹಾಗೂ ಸಾಹಿತ್ಯದ ಕುರಿತು ಮಕ್ಕಳಲ್ಲಿ ತಿಳಿವಳಿಕೆ ಮೂಡಿಸುವ ಚಟುವಟಿಕೆಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕಾಗಿವೆ. ಅದೇರೀತಿ ಮಕ್ಕಳಲ್ಲಿನ ಪ್ರತಿಭೆಯ ವಿಕಾಸಕ್ಕೆ ಪೂರಕವಾಗುವಂಥ ಸಿನಿಮಾಗಳು ಕನ್ನಡದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬರಬೇಕಾಗಿವೆ ಎಂದು ಖರ್ಗೆ ಹೇಳಿದರು.
ಸಮಾರಂಭದಲ್ಲಿ ಭಾಗವಹಿಸಿದ್ದ ಲೋಕೋಪಯೋಗಿ ಸಚಿವ ಧರ್ಮಸಿಂಗ್- ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ರಾಜ್ಯ ಸರ್ಕಾರದ ಅಕ್ಷರ ದಾಸೋಹ ಯೋಜನೆಯಿಂದಾಗಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಬರುತ್ತಿದ್ದಾರೆ ಎಂದು ಧರ್ಮಸಿಂಗ್ ಹೇಳಿದರು.
ಕಾರ್ಮಿಕ ಸಚಿವ ಖಮರುಲ್ ಇಸ್ಲಾಂ, ಸಂಸದ ಇಕ್ಬಾಲ ಅಹ್ಮದ ಸರಡಗಿ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಪುರಂ ಜಿ.ವೆಂಕಟೇಶ, ಸಾಹಿತಿ ಪ್ರೊ.ವಸಂತ ಕುಷ್ಟಗಿ ಮುಂತಾದವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಅವರು ಮಕ್ಕಳ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications