ರೈತರ ವಿರುದ್ಧದ 227 ಪ್ರಕರಣ ಕೈಬಿಡಲು ಸರ್ಕಾರದ ನಿರ್ಧಾರ
ರೈತರ ವಿರುದ್ಧದ 227 ಪ್ರಕರಣ ಕೈಬಿಡಲು ಸರ್ಕಾರದ ನಿರ್ಧಾರ
ಕಾವೇರಿ, ನೀರಾ ಚಳವಳಿಯಲ್ಲಿ ದಾಖಲಿಸಿದ್ದ ಪ್ರಕರಣಗಳ ವಜಾ
2001-2002 ಮತ್ತು 2002-2003 ಇಸವಿಯಲ್ಲಿ ರಾಜ್ಯದ ರೈತರ ಮೇಲೆ ದಾಖಲಾಗಿದ್ದ 64 ಕೇಸುಗಳನ್ನು ಕೈಬಿಡಲು ಕಳೆದ ವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿತು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿರುದ್ಧ ಚಳವಳಿಯ ಸಂದರ್ಭದಲ್ಲಿ ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರೈತರ ವಿರುದ್ಧ ದಾಖಲಿಸಲಾಗಿದ್ದ 105 ಪ್ರಕರಣಗಳನ್ನೂ ಕೈಬಿಡಲಾಗಿದೆ ಎಂದು ವಾರ್ತಾ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ತೆಂಗಿನ ಮರದಿಂದ ‘ನೀರಾ’ ತೆಗೆಯುವುದರ ವಿಷಯವಾಗಿ ರೈತರ ವಿರುದ್ಧ 58 ಕೇಸುಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನೂ ಕೈಬಿಡಲಾಗಿದೆ ಎಂದರು.
ಸಚಿವ ಸಂಪುಟವು ಹೇಮಾವತಿ ನದಿ ಕಾಲುವೆಯಿಂದ ಮಧುಗಿರಿಗೆ ನೀರಿನ ಸರಬರಾಜು ಯೋಜನೆಗೆಂದು 17.94 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅಲ್ಲದೆ ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗೆ, ಮಹಾತ್ಮಾ ಗಾಂಧಿ ಮಾರ್ಕೆಟ್ ನವೀಕರಣಕ್ಕಾಗಿ ರೂ. 18 ಕೋಟಿ ಸಾಲವನ್ನು ಮಂಜೂರು ಮಾಡಿದೆ ಎಂದು ಸಚಿವ ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications