ಸಿದ್ಧಗಂಗೆ ಮಾಜಿ ಸ್ವಾಮಿಗೆ 10 ವರ್ಷ ಕಠಿಣ ಸಜೆ, 25ಲಕ್ಷ ದಂಡ
ಸಿದ್ಧಗಂಗೆ ಮಾಜಿ ಸ್ವಾಮಿಗೆ 10 ವರ್ಷ ಕಠಿಣ ಸಜೆ, 25ಲಕ್ಷ ದಂಡ
ಗೌರಿಶಂಕರರ ಮೇಲಿನ ಸಲಿಂಗ ರತಿ ಆರೋಪ ಸಾಬೀತು
ನ್ಯಾಯಮೂರ್ತಿ ಎಂ.ಎಫ್.ಸಲ್ಡಾನ ಮತ್ತು ನ್ಯಾಯಮೂರ್ತಿ ಕೆ.ರಾಮಣ್ಣ ಅವರನ್ನೊಳಗೊಂಡ ನ್ಯಾಯಪೀಠ, ಗೌರೀಶಂಕರ ಸ್ವಾಮಿಗೆ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ 25 ಲಕ್ಷ ರುಪಾಯಿಗಳ ದಂಡವನ್ನು ಮಂಗಳವಾರ ವಿಧಿಸಿತು. ಅಪರಾಧಿಯನ್ನು ತಕ್ಷಣವೇ ಬಂಧಿಸಿ ಜೈಲಿಗೆ ಕಳಿಸುವಂತೆ ನ್ಯಾಯಪೀಠ ಆದೇಶಿಸಿತು.
ತೀರ್ಪು ನೀಡುವ ಸಂದರ್ಭದಲ್ಲಿ ಗೌರಿಶಂಕರ ಸ್ವಾಮಿ ನ್ಯಾಯಪೀಠದ ಮುಂದೆ ಹಾಜರಿರಲಿಲ್ಲ . ಅನಾರೋಗ್ಯದ ಪ್ರಮಾಣಪತ್ರ ಕಳುಹಿಸಿದ್ದ ಸ್ವಾಮಿ- ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಶಿಕ್ಷೆಯನ್ನು ತಡೆಹಿಡಿಯಬೇಕೆಂದು ಕೋರಿದ್ದರು. ಪ್ರತಿಷ್ಠಿತ ವ್ಯಕ್ತಿಗಳು ಕಾನೂನಿನ ಕಪಿಮುಷ್ಠಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಬಹುದೆನ್ನುವ ಶಂಕೆಯ ಹಿನ್ನೆಲೆಯಲ್ಲಿ ಸ್ವಾಮಿಯ ಮನವಿಗಳನ್ನು ನ್ಯಾಯಪೀಠ ತಳ್ಳಿಹಾಕಿತು.
25 ಲಕ್ಷ ರುಪಾಯಿ ದಂಡ ವಸೂಲಿ ಮಾಡಿ, ಆ ಹಣವನ್ನು ಸ್ವಾಮಿಯಿಂದ ಲೈಂಗಿಕ ಶೋಷಣೆಗೆ ಒಳಗಾದ ದಿಲೀಪ್ಸಿಂಗ್ಗೆ ನೀಡಬೇಕು ಎಂದು ಆದೇಶಿಸಿರುವ ನ್ಯಾಯಪೀಠ- 25 ಲಕ್ಷ ರುಪಾಯಿ ದಂಡ ನೀಡಲು ತಪ್ಪಿದಲ್ಲಿ ಗೌರಿಶಂಕರ ಸ್ವಾಮಿಗೆ ಇನ್ನೂ ಒಂದು ವರ್ಷ ಕಠಿಣ ಸಜೆ ವಿಧಿಸಿದೆ.
ಸಿದ್ಧಗಂಗಾ ಮಠದಲ್ಲಿ ದ್ದ ದಿಲೀಪ್ ಸಿಂಗ್ ಎನ್ನುವ ವಿದ್ಯಾರ್ಥಿಯನ್ನು ಗೌರೀಶಂಕರ ಸ್ವಾಮಿ ಸಲಿಂಗ ರತಿಗೆ ಬಳಸಿಕೊಂಡಿದ್ದರು ಎನ್ನುವ ವಿವಾದ 1986ರಲ್ಲಿ ರಾಜ್ಯಾದ್ಯಂತ ಸುದ್ದಿಯಾಗಿತ್ತು . ಈ ಹಗರಣದ ಹಿನ್ನೆಲೆಯಲ್ಲಿ ಸ್ವಾಮಿಯನ್ನು ಸಿದ್ಧಗಂಗಾ ಮಠದಿಂದ ಉಚ್ಛಾಟಿಸಲಾಗಿತ್ತು .
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications