ಮಂಡ್ಯಕ್ಕೆ ಬೆಣ್ಣೆ ಮೈಸೂರಿಗೆ ಸುಣ್ಣ ; ಕೃಷ್ಣ ವಿರುದ್ಧ ರೈತರ ಆಕ್ರೋಶ
ಮಂಡ್ಯಕ್ಕೆ ಬೆಣ್ಣೆ ಮೈಸೂರಿಗೆ ಸುಣ್ಣ ; ಕೃಷ್ಣ ವಿರುದ್ಧ ರೈತರ ಆಕ್ರೋಶ
ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಒತ್ತಾಯಿಸಿ ಎತ್ತಿನಗಾಡಿ ಪ್ರತಿಭಟನೆ
ಬೆಳೆನಷ್ಟಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ- ಫೆ.5ರ ಗುರುವಾರ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ರೈತರು ಎತ್ತಿನ ಗಾಡಿ ಪ್ರತಿಭಟನೆ ನಡೆಸಿದರು.
ಬರದಿಂದಾಗಿ ಬೆಳೆ ಕೈಗೆ ಹತ್ತುತ್ತಿಲ್ಲ . ಇದೇ ವೇಳೆಯಲ್ಲಿ ಕೃಷಿ ಕಾರ್ಯಗಳಿಗಾಗಿ ಸರ್ಕಾರ ನೀರು ಬಿಡುಗಡೆ ಮಾಡುತ್ತಿಲ್ಲ . ಬೋರ್ವೆಲ್ಗಳಿಂದ ನೀರು ಹಾಯಿಸೋಣವೆಂದರೆ ವಿದ್ಯುತ್ತಿಗೂ ಖೋತಾ ಎಂದು ಪ್ರತಿಭಟನೆ ನಡೆಸಿದ ರೈತರು ದೂರಿದರು. ಕಬ್ಬಿನ ಹೊಲಗಳೆಲ್ಲ ಒಣಗಿ ಹೋಗಿರುವುದರಿಂದ ಬ್ಯಾಂಕುಗಳಿಂದ ಪಡೆದಿರುವ ಕೃಷಿ ಸಾಲಗಳನ್ನು ವಾಪಸ್ಸು ಮಾಡಲೂ ಸಾಧ್ಯವಾಗುತ್ತಿಲ್ಲ ಎಂದು ರೈತರು ಅಲವತ್ತುಕೊಂಡರು.
ತಮಿಳುನಾಡಿನ ರೈತರ ಬೆಳೆಗಳಿಗೆ ರಾಜ್ಯ ಸರ್ಕಾರ ನೀರು ಒದಗಿಸುತ್ತಿದೆ. ಆದರೆ, ರಾಜ್ಯದ ರೈತರ ಬೆಳೆಗಳಿಗೆ ನೀರು ನೀಡಲು ರಾಜ್ಯ ಸರ್ಕಾರ ವಿಫಲವಾಗುತ್ತಿದೆ ಎಂದು ರೈತ ಮುಖಂಡರು ಮಾರ್ಮಿಕವಾಗಿ ನುಡಿದರು. ಮಂಡ್ಯ ಜಿಲ್ಲೆಯ ರೈತರ ಬೆಳೆ ನಷ್ಟವನ್ನು ತುಂಬಲು ಸರ್ಕಾರ 58 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಮೈಸೂರು ಜಿಲ್ಲೆಯ ರೈತರು ಸರ್ಕಾರದ ಮಲತಾಯಿ ಧೋರಣೆಗೆ ಗುರಿಯಾಗಿದ್ದಾರೆ ಎಂದು ರೈತರು ಆಪಾದಿಸಿದರು.
ಹೆದ್ದಾರಿಯಲ್ಲಿ ರೈತರ ಎತ್ತಿನಗಾಡಿಗಳು ಠಿಕಾಣಿ ಹೂಡಿದ್ದರಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು . ಸರ್ಕಾರ ಪರಿಹಾರ ನೀಡದಿದ್ದಲ್ಲಿ ಚಳವಳಿಯನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications