ನಿರುದ್ಯೋಗಿ ಇಂಜಿನಿಯರ್ಗಳ ಹೆಚ್ಚಳ ; ಸೀಟು ಕಡಿತಕ್ಕೆ ಶಿಫಾರಸ್ಸು
ನಿರುದ್ಯೋಗಿ ಇಂಜಿನಿಯರ್ಗಳ ಹೆಚ್ಚಳ ; ಸೀಟು ಕಡಿತಕ್ಕೆ ಶಿಫಾರಸ್ಸು
ವಿದ್ಯಾವಂತ ನಿರುದ್ಯೋಗಿಗಳ ಪ್ರೊ.ಯು.ಆರ್.ರಾವ್ ನೇತೃತ್ವದ ತಾಂತ್ರಿಕ ಶಿಕ್ಷಣ ಸಮಿತಿ ಆತಂಕ
ಪ್ರಸ್ತುತ ಲಭ್ಯವಿರುವ 3.5 ಲಕ್ಷ ಇಂಜಿನಿಯರಿಂಗ್ ಸೀಟುಗಳಲ್ಲಿ 50 ಸಾವಿರ ಸೀಟುಗಳನ್ನು ರದ್ದು ಮಾಡುವುದು ಅನಿವಾರ್ಯ. ಇಂಜಿನಿಯರಿಂಗ್ ಸಂಸ್ಥೆಗಳಿಂದ ಪ್ರತಿವರ್ಷ 3.5 ಲಕ್ಷ ಮಂದಿ ಇಂಜಿನಿಯರ್ಗಳು ಹೊರಬರುತ್ತಿದ್ದಾರೆ. ಇವರಲ್ಲಿ ಪ್ರತಿಶತ 20ಕ್ಕೂ ಹೆಚ್ಚು ಮಂದಿ ಪ್ರತ್ಯಕ್ಷ ನಿರುದ್ಯೋಗ ಎದುರಿಸುತ್ತಿದ್ದಾರೆ ಎಂದು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಹಾಗೂ ಬಾಹ್ಯಾಕಾಶ ಸಮಿತಿಯ ಮಾಜಿ ಅಧ್ಯಕ್ಷ ಪ್ರೊ.ಯು.ಆರ್.ರಾವ್ ಶನಿವಾರ ಸುದ್ದಿಸಂಸ್ಥೆಗೆ ತಿಳಿಸಿದರು.
ಪ್ರಗತಿಯ ದರ ಕುಂಠಿತವಾಗುತ್ತಿದೆ. ಹೆಚ್ಚು ವಿದ್ಯಾವಂತ ನಿರುದ್ಯೋಗಿಗಳನ್ನು ಸೃಷ್ಟಿಸುವುದು ಅತ್ಯಂತ ಅಪಾಯಕರ ಎಂದು ರಾವ್ ಅಭಿಪ್ರಾಯಪಟ್ಟರು. ತಮ್ಮ ವರದಿಯಲ್ಲಿ ಪ್ರಸ್ತಾಪಿಸಿರುವ ಕೆಲವು ಮುಖ್ಯ ವಿಷಯಗಳನ್ನು ಅವರು ವಿವರಿಸಿದರು. ಅವುಗಳೆಂದರೆ :
- ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಮೂರನೇ ಒಂದರಷ್ಟು ಕಡಿಮೆ ಮಾಡುವುದು.
- ಶುಲ್ಕದ ಮೇಲೆ ಶೇ.30ಕ್ಕಿಂತ ಹೆಚ್ಚು ಹಣವನ್ನು ಸಂಸ್ಥೆಗಳು ವಿದ್ಯಾರ್ಥಿಗಳ ಮೇಲೆ ವಿಧಿಸುವಂತಿಲ್ಲ .
- ದೇಶದಲ್ಲಿ ಒಟ್ಟು 924 ಖಾಸಗಿ ಸಂಸ್ಥೆಗಳು ಹಾಗೂ 1200 ಇಂಜಿನಿಯರಿಂಗ್ ಕಾಲೇಜುಗಳು ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಡಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಶೇ.75 ಸಂಸ್ಥೆಗಳು ಸ್ವಯಂ ಆರ್ಥಿಕ ವ್ಯವಸ್ಥೆಯನ್ನು ಹೊಂದಿವೆ. ಆದರೆ ಬಹಳಷ್ಟು ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಸಿಬ್ಬಂದಿ ಇಲ್ಲ . ಮೂಲಭೂತ ಸೌಕರ್ಯಗಳೂ ಉತ್ತಮವಾಗಿಲ್ಲ . ಪ್ರಾಥಮಿಕ ಸವಲತ್ತುಗಳನ್ನು ಒದಗಿಸುವುದು ಅನಿವಾರ್ಯವಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications