ಕಾವೇರಿ ತವರು ಕೊಡಗಲ್ಲಿ ಕುಡಿಯುವ ನೀರಿನ ಕೊರತೆಯ ಆತಂಕ
ಕಾವೇರಿ ತವರು ಕೊಡಗಲ್ಲಿ ಕುಡಿಯುವ ನೀರಿನ ಕೊರತೆಯ ಆತಂಕ
ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಮಸ್ಯೆಗಳ ಪೂರ, ಜಿಲ್ಲಾಧಿಕಾರಿಗಳಿಂದ ಸಾಂತ್ವನ
ಮುಂಬರುವ ಬೇಸಗೆಯ ದಿನಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಆತಂಕ ಜಿಲ್ಲೆಯ ಬಹುತೇಕ ಭಾಗಗಳಲ್ಲಿನ ಜನರಲ್ಲಿ ಕಂಡುಬರುತ್ತಿದೆ. ಇತ್ತೀಚೆಗೆ ಜಿಲ್ಲಾಧಿಕಾರಿ ಶ್ರೀಕಾಂತ್ ವಲಗಡ್ ಅವರು ನಡೆಸಿದ ಸಭೆಯಲ್ಲಿ ನೀರಿನ ಕ್ಷಾಮದ ಸಮಸ್ಯೆಯು ಚರ್ಚೆಗೆ ಬಂದಿದ್ದು , ಸಮಸ್ಯೆಯ ತೀವ್ರತೆಯ ಕುರಿತು ಗಂಭೀರ ಚಿಂತನೆ ನಡೆಯಿತು.
ಕುಡಿಯುವ ನೀರಿನ ಕೊರಧಿತೆ ಎದುರಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಜಿಲ್ಲಾಧಿಕಾರಿ ಶ್ರೀಕಾಂತ್ ಸಾರ್ವಜನಿಕರೊಡನೆ ಚರ್ಚಿಸಿದ್ದಾರೆ. ಸಿದ್ದಾಪುರ, ಮಕ್ಕಂದುರ್, ಮುಕ್ಕೊಡ್ಲು, ದುಬಾರೆ, ಬಲ್ಲಮಾವತಿ, ಹೊಡವಾಡ, ಬೆಲ್ಲೂರ್, ಹುಡಿಕೇರಿ ಮತ್ತು ಇತರ ಅನೇಕ ಪ್ರದೇಶಗಳ ಜನರು ತಮ್ಮ ಅಳಲನ್ನು ಜಿಲ್ಲಾಧಿಕಾರಿಯವರೊಂದಿಗಿನ ಚರ್ಚೆಯ ಸಂದರ್ಭದಲ್ಲಿ ತೋಡಿಕೊಂಡಿದ್ದಾರೆ.
ಇರುವ 18 ತೆರೆದ ಬಾವಿಗಳಲ್ಲಿ (11 ಬಾವಿಗಳನ್ನು ಪಂಚಾಯತಿಯೇ ಜನಬಳಕೆಗೆಂದು ತೋಡಿಸಿದೆ) ಎಲ್ಲವೂ ಬತ್ತಿವೆ ಎಂದು ಸಿದ್ದಾಪುರ ಗ್ರಾಮ ಪಂಚಾಯತಿಯ ಪ್ರತಿನಿಧಿ ಆತಂಕ ವ್ಯಕ್ತಪಡಿಸಿದರು. ಜನತೆಯ ಅಳಲನ್ನು ಆಲಿಸಿದ ಜಿಲ್ಲಾಧಿಕಾರಿ ನೀರಿನ ಕೊರತೆಯನ್ನು ನೀಗಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಒತ್ತು ಕೊಡುವುದು ಎಂದರು.
ಹಳ್ಳಿಗಳ ಲ್ಲಿ ವಿದ್ಯುತ್ ಪೂರೈಕೆ ಕೂಡ ಅನಿಶ್ಚಿತವಾಗಿದೆ. ಮಂಗಳೂರು ವಿದ್ಯುತ್ ಸರಬರಾಜು ನಿಗಮಕ್ಕೆ ರಾತ್ರಿ ಕರೆ ಮಾಡಿದರೂ ಪ್ರಕ್ರಿಯಿಸುವರೇ ಗತಿಯಿಲ್ಲವಾಗಿದೆ ಎನ್ನುವ ಜನತೆಯ ದೂರಿಗೆ ತಕ್ಷಣ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ- ಅಭಿಯಂತರರಾದ ನಂಜಯ್ಯನವರಿಗೆ ಸಮಸ್ಯೆಯ ಪರಿಶೀಲನೆ ಮಾಡುವಂತೆ ಸೂಚಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications