ಬಜೆಟ್ ನಿರಾಶಾದಾಯಕ, ದಿಕ್ಕು ದೆಸೆ ರಹಿತ - ಬಿಜೆಪಿ ತೀವ್ರ ದಾಳಿ
ಬಜೆಟ್ ನಿರಾಶಾದಾಯಕ, ದಿಕ್ಕು ದೆಸೆ ರಹಿತ - ಬಿಜೆಪಿ ತೀವ್ರ ದಾಳಿ
ಚುನಾವಣಾ ಆಯುಕ್ತರ ಕರೆಯ ಮೇರೆಗೆ ಕೃಷ್ಣ ದೆಹಲಿಗೆ
ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಬಜೆಟ್ ಗಮನವನ್ನೇ ಹರಿಸಿಲ್ಲ . ಜನವರಿಯಲ್ಲೇ ಹೊಸ ಲೆವಿಗಳನ್ನು ಹೇರಿರುವ ರಾಜ್ಯ ಸರ್ಕಾರ, ಚುನಾವಣೆಯ ಹಿನ್ನೆಲೆಯಲ್ಲಿ ತೆರಿಗೆ ರಹಿತ ಬಜೆಟ್ ಎಂದು ನಾಟಕವಾಡುತ್ತಿರುವುದಾಗಿ ಜಗದೀಶ ಶೆಟ್ಟರ್ ಟೀಕಿಸಿದರು. ಅವರು ಸೋಮವಾರ, ವಿಧಾನಸಭೆಯಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಲೋಕಸಭೆ ಚುನಾವಣೆಗಳೊಂದಿಗೆ ರಾಜ್ಯವಿಧಾನಸಭೆ ಚುನಾವಣೆಗಳು ನಡೆಯುವ ಕುರಿತು ರಾಜ್ಯ ಸರ್ಕಾರ ರಹಸ್ಯ ಪಾಲನೆ ಮಾಡುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದ ಶೆಟ್ಟರ್- ಚುನಾವಣೆಗಳ ಕುರಿತಂತೆ ಸರ್ಕಾರ ಜನರನ್ನು ದಿಕ್ಕುತಪ್ಪಿಸುವ ಪ್ರಯತ್ನ ಮಾಡುತ್ತಿದೆ, ವೃಥಾ ಗೊಂದಲಗಳನ್ನು ಸೃಷ್ಟಿಸುತ್ತಿದೆ ಎಂದು ಆಪಾದಿಸಿದರು.
ಬಜೆಟ್ ಮೇಲಿನ ಚರ್ಚೆ ನಡೆಯುವ ಸಂದರ್ಭದಲ್ಲಿ ಮುಖ್ಯಮಂತ್ರಿ ಕೃಷ್ಣ ಸದನದಲ್ಲಿ ಹಾಜರಿಲ್ಲದೆ ಇರುವುದನ್ನು ಶೆಟ್ಟರ್ ಆಕ್ಷೇಪಿಸಿದರು. ಶೆಟ್ಟರ್ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ- ನೂತನ ಚುನಾವಣಾ ಮುಖ್ಯಆಯುಕ್ತ ಟಿ.ಎಸ್.ಕೃಷ್ಣಮೂರ್ತಿ ಅವರ ಕರೆಯ ಮೇರೆಗೆ ಕೃಷ್ಣ ದೆಹಲಿಗೆ ತೆರಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಚುನಾವಣೆ ನಡೆಸುವ ಕುರಿತು ಸರ್ಕಾರದಲ್ಲಿ ಗೊಂದಲವಿಲ್ಲ ಎಂದೂ ಖರ್ಗೆ ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications