ಗುಲ್ಬರ್ಗಾದ ಬಸವೇಶ್ವರ ಆಸ್ಪತ್ರೆಯಲ್ಲಿ ಟೆಲಿ ಮೆಡಿಸಿನ್ ಸವಲತ್ತು
ಗುಲ್ಬರ್ಗಾದ ಬಸವೇಶ್ವರ ಆಸ್ಪತ್ರೆಯಲ್ಲಿ ಟೆಲಿ ಮೆಡಿಸಿನ್ ಸವಲತ್ತು
ವೊಕ್ಹಾರ್ಟ್ ಆಸ್ಪತ್ರೆಯಾಂದಿಗೆ ಒಪ್ಪಂದ, ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಹೃದ್ರೋಗಿಗಳಿಗೆ ವರದಾನ
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಮಾಜ ನಡೆಸುತ್ತಿರುವ ಮಹದೇವಪ್ಪ ರಮಾಪುರೆ ಮೆಡಿಕಲ್ ಕಾಲೇಜಿನ ಅಂಗಸಂಸ್ಥೆಯಾದ ಬಸವೇಶ್ವರ ಬೋಧನೆ ಮತ್ತು ಜನರಲ್ ಆಸ್ಪತ್ರೆಯಲ್ಲಿ ಟೆಲಿ ಮೆಡಿಸಿನ್ ವಿಭಾಗ ಇತ್ತೀಚೆಗೆ ಪ್ರಾರಂಭವಾಯಿತು. ಬೆಂಗಳೂರಿನ ವೊಕ್ಹಾರ್ಟ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞ ಡಾ.ವಿವೇಕ್ ಜವಳಿ ಅವರೊಂದಿಗೆ ಸಂವಾದ ನಡೆಸುವ ಮೂಲಕ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಮಾಜದ ಅಧ್ಯಕ್ಷ ಬಿ.ಜಿ.ಜವಳಿ ಟೆಲಿ ಮೆಡಿಸಿನ್ ಸೌಲಭ್ಯಕ್ಕೆ ಚಾಲನೆ ನೀಡಿದರು.
ಶಾಮರಾವ್ ಎನ್ನುವ 60 ವರ್ಷದ ವೃದ್ಧರು ಟೆಲಿ ಮೆಡಿಸಿನ್ ಸವಲತ್ತಿನ ಮೂಲಕ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೊತ್ತಮೊದಲ ರೋಗಿ ಎನ್ನಿಸಿಕೊಂಡರು. ಟೆಲಿ ಮೆಡಿಸಿನ್ ಸಂವಾದದ ಮೂಲಕ ಹೃದಯ ಬೇನೆಯಿಂದ ನರಳುತ್ತಿರುವ ಶಾಮರಾವ್ ಅವರಿಗೆ ಡಾ.ವಿವೇಕ್ ಜವಳಿ ಸಲಹೆ ಸಾಂತ್ವನ ನೀಡಿದರು. ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗುವಂತೆ ಶಾಮರಾವ್ ಅವರಿಗೆ ಡಾ.ವಿವೇಕ್ ಜವಳಿ ಸಲಹೆ ನೀಡಿದರು.
ಪ್ರಸ್ತುತ ಬೆಂಗಳೂರಿನ ವೊಕ್ಹಾರ್ಟ್ ಆಸ್ಪತ್ರೆಯಾಂದಿಗಿನ ಒಪ್ಪಂದದಿಂದಾಗಿ ಹೃದ್ರೋಗಕ್ಕೆ ಮಾತ್ರ ಟೆಲಿ ಮೆಡಿಸಿನ್ ಚಿಕಿತ್ಸೆ ಮೀಸಲಾಗಿದೆ. ಆದರೆ, ಇತರ ರೋಗಗಳಿಗೂ ಚಿಕಿತ್ಸೆ ನೀಡುವ ಉದ್ದೇಶದಿಂದ ಬೆಂಗಳೂರು ಮತ್ತು ಹೈದರಾಬಾದ್ನ ಪ್ರಖ್ಯಾತ ಆಸ್ಪತ್ರೆಗಳೊಂದಿಗೆ ಒಪ್ಪಂದ ಸಾಧಿಸಲು ಪ್ರಯತ್ನ ನಡೆಸಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಮಾಜದ ಅಧ್ಯಕ್ಷ ಬಿ.ಜಿ.ಜವಳಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications