ಮುಂದಿನ ಚುನಾವಣೇಲಿ ಸ್ಪರ್ಧಿಸುವುದು ಖಚಿತ-ರೋಷನ್ಬೇಗ್
ಮುಂದಿನ ಚುನಾವಣೇಲಿ ಸ್ಪರ್ಧಿಸುವುದು ಖಚಿತ-ರೋಷನ್ಬೇಗ್
ನಾನು ದೇಶದ್ರೋಹಿಯಲ್ಲ , ದೇಶದ್ರೋಹಿ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದೂ ಇಲ್ಲ ...
ಓರ್ವ ಕ್ರಿಮಿನಲ್ ಹಾಗೂ ರಾಷ್ಟ್ರದ್ರೋಹಿಯ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಫೆ.10ರ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೋಷನ್ಬೇಗ್ ಹೇಳಿದರು. ರೋಷನ್ಬೇಗ್, ಅವರ ಸೋದರ ರೆಹನ್ ಬೇಗ್ ಹಾಗೂ ಹಿರಿಯ ಪೊಲೀಸರೊಂದಿಗೆ ತನಗೆ ಸಂಪರ್ಕವಿತ್ತು ಎಂದು ವಿಚಾರಣೆಯ ವೇಳೆ ತೆಲಗಿ ನೀಡಿದ್ದಾನೆ ಎನ್ನಲಾಗಿರುವ ಹೇಳಿಕೆಯ ಕುರಿತು ಬೇಗ್ ಈ ರೀತಿ ಪ್ರತಿಕ್ರಿಯಿಸಿದರು.
ಹಜ್ ಯಾತ್ರೆಯಿಂದ ಬೆಂಗಳೂರಿಗೆ ವಾಪಸ್ಸಾಗಿರುವ ಬೇಗ್, ಛಾಪಾ ಪಾಪದ ಕುರಿತ ಸುದ್ದಿಗಾರರ ಪ್ರಶ್ನೆಗಳಿಗೆ- ನಾನು ಸಿಬಿಐ ತನಿಖೆಯ ನಿರೀಕ್ಷೆಯಲ್ಲಿದ್ದೇನೆ. ಸಿಬಿಐ ಪತ್ತೆ ಹಚ್ಚುವ ಸತ್ಯಗಳ ನಿರೀಕ್ಷೆಯಲ್ಲಿದ್ದೇನೆ ಎಂದರು.
ಚುನಾವಣೆಗಳು ಸನ್ನಿಹಿತವಾಗಿರುವ ಸಂದರ್ಭದಲ್ಲಿ ಅಲ್ಪ ಸಂಖ್ಯಾಕರ ಸಮುದಾಯದ ನಾಯಕನೊಬ್ಬ ಅಪಾರ ಜನಪ್ರಿಯತೆ ಗಳಿಸಿರುವುದನ್ನು ಸಹಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ಬೇಗ್ ದೂರಿದರು. 14,500 ಕೋಟಿ ರುಪಾಯಿ ಮೊತ್ತದ ಹುಡ್ಕೋ ಸಾಲ ಮಂಜೂರಾತಿ ಹಗರಣದಲ್ಲಿ ಬಿಜೆಪಿಯ ಅನಂತಕುಮಾರ್ ಷಾಮೀಲಾಗಿರುವ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಯಾವುದೇ ದೇಶದ್ರೋಹದ ಕೆಲಸಗಳಲ್ಲಿ ಭಾಗಿಯಾಗಿಲ್ಲ ಎನ್ನುವುದನ್ನು ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಸತ್ಯ ಒಂದಲ್ಲಾ ಒಂದು ದಿನ ಹೊರಬರುತ್ತದೆ. ನಾನು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ತೆಲಗಿ ಮುಂದೊಂದು ದಿನ ಹೇಳಿದರೂ ಆಶ್ಚರ್ಯವಿಲ್ಲ ಎಂದು ಬೇಗ್ ಹೇಳಿದರು.
ಸರ್ಕಾರವನ್ನು ಮುಜುಗರದಿಂದ ಪಾರು ಮಾಡುವ ಉದ್ದೇಶದಿಂದಷ್ಟೇ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಬೇಗ್ ಹೇಳಿದರು. ಪ್ರತಿಪಕ್ಷಗಳ ಸತತ ಒತ್ತಾಯದ ಹಿನ್ನೆಲೆಯಲ್ಲಿ ಕಳೆದ ಜನವರಿ 4ರಂದು ರೋಷನ್ಬೇಗ್ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸಚಿವ ಸಂಪುಟದಿಂದ ನಿರ್ಗಮಿಸಿದ್ದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಜಯಮಹಲ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ರೋಷನ್ಬೇಗ್ ಸುದ್ದಿಗಾರರ ಪ್ರಶ್ನೆಯಾಂದಕ್ಕೆ ಉತ್ತರಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications