ಸುವರ್ಣ ಚತುರ್ಭುಜ : 78 ಕಿ.ಮೀ. ಹೆದ್ದಾರಿ ರಾಷ್ಟ್ರಕ್ಕೆ ಸಮರ್ಪಣೆ
ಸುವರ್ಣ ಚತುರ್ಭುಜ : 78 ಕಿ.ಮೀ. ಹೆದ್ದಾರಿ ರಾಷ್ಟ್ರಕ್ಕೆ ಸಮರ್ಪಣೆ
ತುಮಕೂರು- ಬೆಂಗಳೂರು ಪ್ರಯಾಣ, ಕೊಂಚ ಆರಾಮ
ಕರ್ನಾಟಕದ ತುಮಕೂರು ನಗರದ ಹೊರವಲಯದ ಮಂಚಕಲ್ಕುಪ್ಪೆ ಬಳಿ ನಡೆದ ಸಮಾರಂಭದಲ್ಲಿ ನೆಲಮಂಗಲ-ತುಮಕೂರು 29.5 ಕಿಮೀ ಮತ್ತು ರಾಷ್ಟ್ರೀಯ ಹೆದ್ದಾರಿ-04 ರ 0.62 ಕಿಮೀ ಉದ್ದದ ಚತುಷ್ಪಥ ರಸ್ತೆಯನ್ನು ಖಂಡೂರಿ ರಾಷ್ಟ್ರಕ್ಕೆ ಅರ್ಪಿಸಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಲೋಕೋಪಯೋಗಿ ಸಚಿವ ಧರ್ಮಸಿಂಗ್ ವಹಿಸಿದ್ದರು. ಸ್ಥಳೀಯ ಶಾಸಕ ಶಿವಣ್ಣ, ಯೋಜನಾ ನಿರ್ದೇಶಕ ಡಿ.ಎಲ್.ಎನ್.ರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಗದಿತ ಅವಧಿಗಿಂತ 4 ತಿಂಗಳು ಮುನ್ನ, ಅಂದರೆ ಕೇವಲ 7 ತಿಂಗಳಲ್ಲಿ ಕಾಮಗಾರಿ ಸಂಪೂರ್ಣಗೊಂಡಿದೆ. ಈ ಕಾರ್ಯವನ್ನು ಜೆಸ್ ಟೋಲ್ ಕಂಪೆನಿಗೆ ಗುತ್ತಿಗೆ ನೀಡಲಾಗಿತ್ತು. ಸುಮಾರು 155 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ನಿರ್ಮಾಣಗೊಂಡಿದೆ. ಆತ್ಯಾಧುನಿಕ ತಂತ್ರಜ್ಞಾನ ಬಳಸಿ 100 ಕಿಮೀ ವೇಗದಲ್ಲಿ ಚಲಿಸಬಹುದಾದ ಸೇತುವೆ, ಪಾದಾಚಾರಿ ಸುರಂಗ ಮಾರ್ಗಗಳು , ಮೇಲು ಸೇತುವೆ, ಹೆದ್ದಾರಿಯ ಇಕ್ಕೆಲೆಗಳಲ್ಲಿ ಗ್ರಾಮೀಣ ರಸ್ತೆ ಇತ್ಯಾದಿ ಸೌಲಭ್ಯ ಕಲ್ಪಿಸಿ ಈ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದರು .
ದೇಶದಲ್ಲಿ ಪ್ರಧಾನಿ ಕನಸಿನ 24,000 ಕಿಮೀ ಉದ್ದದ ಚತುಷ್ಪಥ ರಸ್ತೆಗಳ ನಿರ್ಮಾಣ ಆಗಲಿವೆ. 2007 ರಲ್ಲಿ ಕನ್ಯಾಕುಮಾರಿ- ಶ್ರಿನಗರ ಹೆದ್ದಾರಿಯ ಕಾರ್ಯ ಸಂಪೂರ್ಣಗೊಳ್ಳಲಿದೆ ಎಂದರು. ಬಿಹಾರದಲ್ಲಿ ಆಡಳಿತಾತ್ಮಕ ಸಮಸ್ಯೆಯಿಂದ ಹೆದ್ದಾರಿ ಕಾಮಗಾರಿಯ ವೇಗ ಕುಂಠಿತವಾಗಿದೆ. ಉಳಿದೆಡೆ ಉತ್ತಮ ಪ್ರಗತಿಯಲ್ಲಿದೆ. ದೇಶದಲ್ಲಿ 94 ಸಾವಿರ ಕೋಟಿ ರೂಪಾಯಿಯನ್ನು ರಸ್ತೆಯ ಆಧುನಿಕರಣಕ್ಕೆ ಬಳಸಲಾಗುವುದು ಎಂದು ಹೇಳಿದರು.
ಚುನಾವಣಾ ನೀತಿ ಸಂಹಿತೆ ಪಾಲಿಸಬೇಕೆಂದ ಚುನಾವಣಾ ಆಯೋಗದ ಆಧ್ಯಕ್ಷ ಟಿ ಎಸ್ ಕೃಷ್ಣಮೂರ್ತಿಯವರ ಹೇಳಿಕೆಯನ್ನು ಗೌರವಿಸುತ್ತೇನೆ. ಆದರೆ ಕೇಂದ್ರ ಸರಕಾರ ಯಾವ ರೀತಿಯಲ್ಲೂ ನೀತಿ ಸಂಹಿತೆ ಮೀರಿಲ್ಲ ಎಂದು ಸಚಿವ ಖಂಡೂರಿ ನುಡಿದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications