ವಿಧಾನಸಭೆ ವಿಸರ್ಜನೆ : ಈಗ, ಇಂದು, ನಾಳೆ ಅಥವಾ ಸೆಪ್ಟಂಬರ್?
ವಿಧಾನಸಭೆ ವಿಸರ್ಜನೆ : ಈಗ, ಇಂದು, ನಾಳೆ ಅಥವಾ ಸೆಪ್ಟಂಬರ್?
ಶಾಸಕರಿಗೆ ವಿದಾಯಕೂಟ, ಚುನಾವಣೆ ಬಗ್ಗೆ ಕೃಷ್ಣ ರಹಸ್ಯ
ವಿಧಾನ ಸಭೆಯಲ್ಲಿ (ಫೆ.11) 2004-05 ರ ಬಜೆಟ್ ಕುರಿತಾದ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೃಷ್ಣ - ‘ರಾಜ್ಯ ವಿಧಾನಸಭೆಗೆ ಸೆಪ್ಟಂಬರ್ ಮಾಸದಲ್ಲಿ ಚುನಾವಣೆ ನಡೆಯಬಹುದು. ನಾನು ಇಷ್ಟು ಶೀಘ್ರದಲ್ಲಿ ಲೋಕಸಭಾ ಚುನಾವಣೆ ನಿರೀಕ್ಷಿಸಿರಲಿಲ್ಲ. ಕೇಂದ್ರ ಸರಕಾರ ಅವಧಿಪೂರ್ವ ಚುನಾವಣೆ ಹೇರಿದೆ’ ಎಂದು ನುಡಿದರು. ಈ ಕುರಿತು ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.
ಫೆ.10ರಂದು ನಡೆದ ಕಾಂಗೈ ಶಾಸಕರ ಸಭೆಯಲ್ಲಿ ಲೋಕಸಭೆಯ ಜೊತೆ ಏಕಕಾಲದಲ್ಲಿ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆಸುವ ಅಭಿಪ್ರಾಯ ವ್ಯಕ್ತವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಬಿ. ಜನಾರ್ಧನ ಪೂಜಾರಿ ಈ ಹಿಂದೆಯೇ, ಫೆ.12 ರಂದು ವಿಧಾನಸಭೆ ವಿಸರ್ಜನೆಯಾಗಲಿದೆ ಎಂದು ಘೋಷಿಸಿದ್ದರು. ಈ ಕುರಿತು ಕಾಂಗೈ ಹೈಕಮಾಂಡ್ ತನ್ನ ಅಂತಿಮ ತೀರ್ಮಾನವನ್ನು ಈವರೆಗೆ ಪ್ರಕಟಿಸಿಲ್ಲ. ‘ಇನ್ನು ಕೆಲವೇ ಗಂಟೆಗಳಲ್ಲಿ ವಿಧಾನಸಭೆ ವಿಸರ್ಜನೆಯಾಗಬಹುದು’ ಎಂದ ಸಂಪುಟ ಸಚಿವರೊಬ್ಬರ ಹೇಳಿಕೆಯೂ ಈ ನಡುವೆ ಪ್ರಕಟವಾಗಿದೆ. ಫೆ.11 ರಂದು ವಿಧಾನಸಭಾ ಅಧ್ಯಕ್ಷರು ಶಾಸಕರಿಗೆ ವಿದಾಯಕೂಟ ನೀಡಿಯಾಗಿದೆ.
ಅಂತೂ ಚಾತಕ ಪಕ್ಷಿಯಂತೆ ಚುನಾವಣೆ ದಿನಾಂಕಕ್ಕಾಗಿ ಕಾಯುತ್ತಿರುವ ವಿರೋಧ ಪಕ್ಷದವರನ್ನು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಸತಾಯಿಸುತಿದ್ದಾರೆ. ಇದು ಅವರ ವಿನೂತನ ರಾಜಕೀಯ ಚದುರಂಗದಾಟ ಆಗಿರಬಹುದೇ?
(ಏಜನ್ಸೀಸ್)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications