ಮಂದಿರನಿರ್ಮಾಣದಿಂದ ದೇಶಕ್ಕೆ, ಪಕ್ಷಗಳಿಗೆ ಹಿತ-ಪೇಜಾವರಶ್ರೀ
ಮಂದಿರನಿರ್ಮಾಣದಿಂದ ದೇಶಕ್ಕೆ, ಪಕ್ಷಗಳಿಗೆ ಹಿತ-ಪೇಜಾವರಶ್ರೀ
ಪ್ರಣಾಳಿಕೆಗಳಲ್ಲಿ ಮಂದಿರ ವಿಷಯ ಸೇರ್ಪಡೆ ಮಾಡುವಂತೆ ರಾಜಕೀಯ ಪಕ್ಷಗಳಿಗೆ ಕರೆ
ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಸರ್ವ ಗಣಾಚಾರ್ಯ ಸೇವಾ ಸಂಘದ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿ ಮಾತನಾಡುತ್ತಿದ್ದ ವಿಶ್ವೇಶತೀರ್ಥ ಸ್ವಾಮೀಜಿ- ಶಾಂತಿಯುತ ರೀತಿಯಲ್ಲಿ ರಾಮಮಂದಿರ ನಿರ್ಮಾಣ ಪ್ರಯತ್ನಗಳು ನಡೆಯಬೇಕಾಗಿದೆ. ಮುಂಬರುವ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ಮಂದಿರ ವಿಷಯವನ್ನು ಪ್ರಸ್ತಾಪಿಸಬೇಕು ಎಂದರು.
ಹಿಂದೂಗಳ ಪಾಲಿಗೆ ರಾಮಜನ್ಮ ಭೂಮಿ ಪವಿತ್ರ ಸ್ಥಳವಾಗಿದೆ. ಅಗತ್ಯವಿದ್ದರೆ ಮಂದಿರಕ್ಕೆ ಸ್ವಲ್ಪ ದೂರದಲ್ಲಿ ಮಸೀದಿಯನ್ನೂ ನಿರ್ಮಿಸಬಹುದು. ಮಂದಿರ ನಿರ್ಮಿಸಲು ಭಾರತೀಯ ಜನತಾ ಪಕ್ಷ ಉತ್ಸುಕವಾಗಿದ್ದರೂ, ಅದರ ಅಂಗಪಕ್ಷಗಳು ಈ ಪ್ರಯತ್ನವನ್ನು ನಿಯಂತ್ರಿಸುತ್ತಿವೆ ಎಂದು ಸ್ವಾಮೀಜಿ ಹೇಳಿದರು.
ಮಂದಿರ ನಿರ್ಮಾಣ ಕುರಿತಂತೆ ಎಲ್ಲ ರಾಜಕೀಯ ಪಕ್ಷಗಳೊಂದಿಗೂ ಚರ್ಚಿಸುತ್ತೇವೆ. ಈ ವಿಷಯ ಪರಸ್ಪರರ ಹಿತಾಸಕ್ತಿಯನ್ನು ರಕ್ಷಿಸುವ ರೀತಿಯಲ್ಲಿ ಬಗೆಹರಿಯಬೇಕು ಎಂದರು.
ಮಂದಿರ ನಿರ್ಮಾಣ ದೇಶದ ಹಿತಾಸಕ್ತಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಅನುಕೂಲಕರ ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಮಂದಿರ ನಿರ್ಮಾಣದ ಕುರಿತು ವಿಶ್ವ ಹಿಂದೂ ಪರಿಷತ್ನ ನಿಲುವೇನು ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಶ್ರೀಗಳು- ತಾವು ವಿಹೆಚ್ಪಿಯ ಸಲಹೆಗಾರರು ಮಾತ್ರ ಎಂದು ಸ್ಪಷ್ಟಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications