ಜನತಾ ಪರಿವಾರದ ಪರಿಸಮಾಪ್ತಿ ; ದೇವೇಗೌಡರ ಘೋಷಣೆ
ಜನತಾ ಪರಿವಾರದ ಪರಿಸಮಾಪ್ತಿ ; ದೇವೇಗೌಡರ ಘೋಷಣೆ
ಚುನಾವಣೆಗಳಲ್ಲಿ ಜಾತ್ಯತೀತ ಜನತಾದಳ ಒಂಟಿಯಾಗಿ ಸ್ಪರ್ಧೆ, ಮಾತುಕತೆ ಮುಗಿದ ಅಧ್ಯಾಯ
ಜನತಾ ಪರಿವಾರದ ಇತರ ಪಕ್ಷಗಳೊಂದಿಗೆ ವಿಲೀನ ಅಥವಾ ಸ್ಥಾನ ಹೊಂದಾಣಿಕೆಗೆ ಇನ್ನು ಅವಕಾಶವೇ ಇಲ್ಲ . ಚುನಾವಣೆಗಳು ಸನ್ನಿಹಿತವಾಗಿದ್ದು , ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧದ ಯುದ್ಧ ಇಂದಿನಿದಲೇ ಆರಂಭವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ರಣಕಹಳೆ ಮೊಳಗಿಸಿದರು.
ಹೊಂದಾಣಿಕೆಯ ಮಾತನಾಡುವುದನ್ನು ಕೈಬಿಟ್ಟು , ನೊಂದವರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆಗಳನ್ನು ಆಲಿಸುತ್ತೇವೆ. ಜಾತ್ಯತೀತ ಜನತಾದಳ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು , ಜನತೆಯ ಆಶೀರ್ವಾದದೊಂದಿಗೆ ಅಧಿಕಾರಕ್ಕೆ ಬರಲಿದೆ. ಒಂದುವೇಳೆ ಮತದಾರರು ತಿರಸ್ಕರಿಸಿದರೂ ಚಿಂತೆಯಿಲ್ಲ . ಆದರೆ ಇತರರ ಕೈಗೊಂಬೆಯಾಗಲು ತಮ್ಮ ಪಕ್ಷ ಇಷ್ಟಪಡುವುದಿಲ್ಲ ಎಂದು ದೇವೇಗೌಡ ಹೇಳಿದರು.
ಪ್ರಗತಿಪರ ಜನತಾದಳದ ಕೆಲವು ನಾಯಕರು ಸೋನಿಯಾ ಹಾಗೂ ವಾಜಪೇಯಿ ಅವರ ಮನೆ ಬಾಗಿಲಲ್ಲಿ ನಿಂತಿದ್ದಾರೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಇದಕ್ಕಾಗಿ ಜಾತ್ಯತೀತ ಜನತಾದಳದ ಕಾರ್ಯಕರ್ತರು ವಿಚಲಿತರಾಗಬೇಕಿಲ್ಲ . ನಂಬಿರುವ ತತ್ವ ಹಾಗೂ ಸಿದ್ಧಾಂತವನ್ನು ತಾವು ಯಾವತ್ತಿಗೂ ಬಿಡುವುದಿಲ್ಲ . ಜನತಾ ಪರಿವಾರ ಎನ್ನುವುದರ ಪರಿ ಸಮಾಪ್ತಿ ಆಗಿಹೋಗಿದೆ ಎಂದು ದೇವೇಗೌಡ ಹೇಳಿದರು.
ಫೆ.22ರಿಂದ ಜಾತ್ಯತೀತ ಜನತಾದಳದ ಮುಖಂಡರು ರಾಜ್ಯ ಪ್ರವಾಸ ಕೈಗೊಳ್ಳುವರು. ಮಾರ್ಚ್ ಮೊದಲ ವಾರದಲ್ಲಿ ಈ ಪ್ರವಾಸ ಕೊನೆಗೊಳ್ಳಲಿದ್ದು , ಆನಂತರ ಬೃಹತ್ ಪ್ರಮಾಣದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದರು.
ಟೀವಿ ವಾಹಿನಿಗಳಲ್ಲಿ ಜಾಹಿರಾತು ನೀಡುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮಗಳನ್ನು ದೇವೇಗೌಡ ಟೀಕಿಸಿದರು. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸೂಲಗಿತ್ತಿಯಂತೆ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ವ್ಯಂಗ್ಯವಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications