ಪರಿಶುದ್ಧ ಆರೋಗ್ಯ ರೀತಿ : ರಾಜ್ಯದಲ್ಲಿ ಸಾವಯವ ಕೃಷಿ ನೀತಿ
ಪರಿಶುದ್ಧ ಆರೋಗ್ಯ ರೀತಿ : ರಾಜ್ಯದಲ್ಲಿ ಸಾವಯವ ಕೃಷಿ ನೀತಿ
ನೆಲ-ಜಲ, ಮನುಜ-ಪ್ರಕೃತಿ ರಕ್ಷಣೆಗಾಗಿ : ಎಚ್.ಕೆ. ಪಾಟೀಲ್
ರಾಸಾಯನಿಕ ಗೊಬ್ಬರ ಬಳಸಿದ ಉತ್ಪನ್ನಗಳು ಮನುಷ್ಯನ ಆರೋಗ್ಯಕ್ಕೆ ಹಾಗೂ ಪ್ರಕೃತಿಗೆ ಉತ್ತಮವಲ್ಲ. ಪರಿಸರ ಹಾಗೂ ಜೀವಸಂಕುಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸೂಕ್ಷ್ಮ ಪ್ರದೇಶಗಳನ್ನು ರಾಸಾನಿಕ ಗೊಬ್ಬರ ಮುಕ್ತ ವಲಯವನ್ನಾಗಿ ಘೋಷಿಸಲಾಗುವುದು. ಬಹು ರಾಷ್ಟ್ರೀಯ ಗೊಬ್ಬರ ಕಂಪೆನಿಗಳ ಒತ್ತಡಕ್ಕೆ ಮಣಿಯದೆ, ಜನತೆ ಹಾಗೂ ಬರ ಪೀಡಿತ ಪ್ರದೇಶದ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ನೀತಿಯನ್ನು ರೂಪಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಇತ್ತೀಚೆಗೆ ತೀವ್ರ ಬೇಡಿಕೆ ಪಡೆದಿರುವ ಸಾವಯವ ಕೃಷಿ ಉತ್ಪನ್ನಗಳ ತಯಾರಿಕೆಗೆ ರಾಜ್ಯ ಮುಂದಡಿ ಇಡುತ್ತಿದೆ. ಇದರ ಅಳವಡಿಕೆಗಾಗಿ ‘ಮಿನಿ ಮಿಷನ್’ ರಚಿಸಲಾಗುವುದು. ಕೃಷಿ ವಿಜ್ಞಾನಿಗಳು ಇದರ ಮುಖ್ಯಸ್ಥರು. ಸಾವಯವ ಕೃಷಿ ನಿರತ ರೈತ ಮುಖಂಡರು ಈ ಸಮಿತಿಯಲ್ಲಿರುತ್ತಾರೆ. ಕೃಷಿ ವೆಚ್ಚ ತಗ್ಗಿಸಿ ಉತ್ಪಾದನೆ ಹೆಚ್ಚಿಸಲು ಇದೊಂದೇ ಪರಿಹಾರ ಹಾಗೂ ನೈಸರ್ಗಿಕವಾದ ಸಂರಕ್ಷಣೆ ದೊರೆಯುತ್ತದೆ ಎಂದು ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಆಧುನಿಕ ತಂತ್ರಜ್ಞಾನ ಆಳವಡಿಕೆಯಿಂದ ಅಡ್ಡ ಪರಿಣಾಮಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಸಾವಯವ ಕೃಷಿ ನೀತಿಯನ್ನು ಸ್ವಾಗತಿಸೋಣ. ಸಾಂಪ್ರದಾಯಿಕ ಕೃಷಿ ಪದ್ಧತಿ ಹಾಗೂ ಪರಿಸರ ಪ್ರೇಮಿವಿಜ್ಞಾನವನ್ನು ತನ್ನದಾಗಿಸಿಕೊಳ್ಳುವುದರಿಂದ ಸಾವಯವ ಶೈಲಿಯ ಬದುಕಿಗೆ ಜೈ ಎನ್ನೋಣ!
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications