ನಿಮ್ಹಾನ್ಸ್ ಸುವರ್ಣಮಹೋತ್ಸವ ಸಮಾರಂಭದಲ್ಲಿ ಉಪರಾಷ್ಟ್ರಪತಿ
ನಿಮ್ಹಾನ್ಸ್ ಸುವರ್ಣಮಹೋತ್ಸವ ಸಮಾರಂಭದಲ್ಲಿ ಉಪರಾಷ್ಟ್ರಪತಿ
ಅಭಿವೃದ್ಧಿ ಯೋಜನೆ ಶ್ರಿಸಾಮಾನ್ಯ ಪರವಾಗಿರಬೇಕು: ಶೇಖಾವತ್
ಅವರು ಬೆಂಗಳೂರಿನಲ್ಲಿ ನಿನ್ನೆ (ಫೆ.17) ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯ (NIMHANS)ಸುವರ್ಣಮಹೋತ್ಸವ ಆಚರಣೆಯ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತಿದ್ದರು.
‘ ನಮ್ಮಲ್ಲಿ ಅಸಹಾಯಕರ ಕುರಿತು ಸೂಕ್ಷ್ಮ ಸಂವೇದನೆ ಇರಬೇಕು. ನಮ್ಮಲ್ಲಿ ಮೌಲ್ಯಯುತ ಸಮಾಜದ ನಿರ್ಮಾಣ ಆಗಬೇಕಾಗಿದೆ. ತಾಂತ್ರಿಕತೆಯು ಮಾನವನ ಮಾನಸಿಕ ನೋವನ್ನು ನಿವಾರಿಸಬಹುದಾದರೆ ಅದು ಸಾಧನೆಯೇ ಸರಿ. ಆ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯುತ್ತಿವೆ. ಐಟಿ, ಬಿಟಿ, ವೈದ್ಯಕೀಯ ತಂತ್ರಜ್ಞಾನ ಮುಂತಾದುವುಗಳ ಮೂಲಕ ಸಾಪ್ಟವೇರ್,ಹಾರ್ಡ್ವೇರ್ ತಂತ್ರಜ್ಞಾನದ ಬಳಕೆಯಾಂದಿಗೆ ಮಾನಸಿಕ ಅಸ್ವಸ್ಥ ಮಗುವಿನ ಮಿದುಳು ಕಾರ್ಯಮಾಡುವಂತೆ ಮಾಡಬಹುದಾದ ಸಮಯ ಶೀಘ್ರದಲ್ಲೇ ಬರಲಿ ಎಂದು ಆಶಿಸುತ್ತೇನೆ. ನಾವು ನಮ್ಮ ಸಂಸ್ಕೃತಿ, ಆಧ್ಯಾತ್ಮಿಕ ವಿಚಾರಧಾರೆಯನ್ನು ಅಳವಡಿಸಿಕೊಂಡು ಮಾನವೀಯ ಮೌಲ್ಯವನ್ನು ಬೆಳೆಸಬೇಕಾಗಿದೆ. ನಮ್ಮ ಧರ್ಮದ ಆಧ್ಯಾತ್ಮಿಕ ತತ್ವದಂತೆ ಸಹಬಾಳ್ವೆ, ಅಸಹಾಯಕರ ಬಗೆಗಿನ ಒಲವನ್ನು ಬೆಳಸಬೇಕು’ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಆರೋಗ್ಯ ಮತ್ತು ಸಮಾಜಕಲ್ಯಾಣ ಖಾತೆ ಸಚಿವೆ ಸುಶ್ಮಾಸ್ವರಾಜ್ ತಮ್ಮ ಭಾಷಣದಲ್ಲಿ,
‘ನಿಮ್ಹಾನ್ಸ್ ಹೇಳಿದ ಹಾಗೆ ‘ಭಾರತದಲ್ಲಿ ವಾರ್ಷಿಕ 10 ಕೋಟಿ ಮಂದಿ ಮಾನಸಿಕ ಚಿಕಿತ್ಸೆಗೆ ಒಳಪಡಬೇಕಾಗುತ್ತದೆ’ ಎಂಬುದನ್ನು ಒಪ್ಪಿಕೊಂಡರು. ಇದಕ್ಕೆ ಮಣ್ಣಿನ ಸವಕಳಿ, ವಿಭಜನೆಗೊಳ್ಳುತ್ತಿರುವ ಅವಿಭಕ್ತ ಕುಟುಂಬ, ಕಛೇರಿಯ ಒತ್ತಡಗಳು, ಕೌಟುಂಬಿಕ ಮೌಲ್ಯದ ಕುಸಿತಗಳೆಲ್ಲ ಕಾರಣ’ ಎಂದು ನುಡಿದರು.
‘ಸರಕಾರ ಭಾರತೀಯ ಮನಶಾಸ್ತ್ರಜ್ಞರು ವಿದೇಶಕ್ಕೆ ಹೋಗುವುದನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಆಲೋಚಿಸುತ್ತಿದೆ. ಕಳೆದ ವರ್ಷ ಈ ಬೆಳವಣಿಗೆಯನ್ನು ನಾನು ಗಮನಿಸಿದ್ದೇನೆ. ನಿಮ್ಯಾಹನ್ಸ್ನ ಬಹು ನಿರೀಕ್ಷಿತ ‘ಗಾಮಾ ನೈಫ್’ ಉಪಕರಣಕ್ಕಾಗಿ , ವಿಶ್ವವಿದ್ಯಾಲಯಕ್ಕೆ (NIMHANS Deemed University) 15 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು’ ಎಂದು ಹೇಳಿದರು.
ಸಮಾರಂಭದಲ್ಲಿ ರಾಜ್ಯಪಾಲ ಟಿ.ಎನ್.ಚತುರ್ವೇದಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಎ.ಬಿ. ಮಾಲಕರೆಡ್ಡಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅನಂತಕುಮಾರ್, ನಿರ್ದೇಶಕ ಡಾ.ಡಿ.ನಾಗರಾಜ್ ಅವರು ಉಪಸ್ಥಿತರಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications