ಗೌಡರ ದಳದಲ್ಲಿ ಸಮತಾ ಐಕ್ಯ, ಕೃಷ್ಣ ‘ರಣಹೇಡಿ’ಎಂದ ಪ್ರಸಾದ್
ಗೌಡರ ದಳದಲ್ಲಿ ಸಮತಾ ಐಕ್ಯ, ಕೃಷ್ಣ ‘ರಣಹೇಡಿ’ಎಂದ ಪ್ರಸಾದ್
ಎನ್ಡಿಎಗೆ ಶ್ರೀನಿವಾಸಪ್ರಸಾದ್ ವಿದಾಯ, ಕಾಂಗ್ರೆಸ್ ಸೋಲಿಸಲು ಸಂಕಲ್ಪ
ಜಾತ್ಯತೀತ ಜನತಾದಳದ ಮುಖಂಡರೊಂದಿಗೆ ಸದ್ಯದಲ್ಲೇ ಚರ್ಚೆ ನಡೆಸಿ ವಿಲೀನದ ದಿನಾಂಕವನ್ನು ನಿರ್ಧರಿಸಲಾಗುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪ್ರಸಾದ್ ಪ್ರಕಟಿಸಿದರು. ಇದಕ್ಕೂ ಮುನ್ನ ಜಾತ್ಯತೀತ ದಳದೊಂದಿಗೆ ವಿಲೀನ ಹೊಂದುವ ಕುರಿತು ಶ್ರೀನಿವಾಸಪ್ರಸಾದ್ ತಮ್ಮ ಅಭಿಮಾನಿಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸುವ ಉದ್ದೇಶದಿಂದ ಜಾತ್ಯತೀತ ಜನತಾದಳ ಸೇರುತ್ತಿದ್ದೇನೆ. ಬಿಜೆಪಿಯಲ್ಲಿರುವ ರಾಜಶೇರಮೂರ್ತಿ ಕೂಡ ನಮ್ಮೊಂದಿಗೆ ಬರುತ್ತಾರೆ ಎಂದ ಶ್ರೀನಿವಾಸಪ್ರಸಾದ್- ತಾವು ಇನ್ನುಮುಂದೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ ದೂರವಿರುವುದಾಗಿ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಅನಂತಕುಮಾರ್ ತಮಗೆ ಮಾನ್ಯತೆ ನೀಡಲಿಲ್ಲ . ಅನಂತಕುಮಾರ್ ಅವರ ಅನಾಯಕತ್ವದಿಂದ ಬೇಸತ್ತಿರುವುದು ಕೂಡ ಎನ್ಡಿಎ ತೊರೆಯಲು ಕಾರಣವಾಗಿದೆ ಎಂದರು.
ಬರ, ಕಾವೇರಿ ವಿವಾದ, ನಾಗಪ್ಪ ಹತ್ಯೆ ಮುಂತಾದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ವಿಫಲರಾಗಿದ್ದಾರೆ ಎಂದು ದೂರಿದ ಪ್ರಸಾದ್- ಮುಖ್ಯಮಂತ್ರಿ ಕೃಷ್ಣರನ್ನು ರಣಹೇಡಿ ಎಂದು ಜರಿದರು. ಮುಂಬರುವ ಚುನಾವಣೆಗಳಲ್ಲಿ ಅನಾರೋಗ್ಯದ ಕಾರಣ ತಾವು ಸ್ಪರ್ಧಿಸುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications