‘ಕುಣಿತ- ಲಂಚದ ಆಮಿಷ ಊಟದ ಜೊತೆಗಿನ ಉಪ್ಪಿನಕಾಯಂತೆ’
‘ಕುಣಿತ- ಲಂಚದ ಆಮಿಷ ಊಟದ ಜೊತೆಗಿನ ಉಪ್ಪಿನಕಾಯಂತೆ’
ಸಚಿವ ಡಿಕೆಶಿಗೆ ವಿಶ್ವನಾಥ್ ಮಾತಿನ ಗುದ್ದು
ಬರೇ ಅನ್ನ ಸಾಂಬಾರು ತಿಂದರೆ ರುಚಿ ಇರುವುದಿಲ್ಲ. ಊಟದ ಜೊತೆಗೆ ಜತೆಗೆ ಉಪ್ಪಿನಕಾಯಿ, ಹಪ್ಪಳ ಇತ್ಯಾದಿ ಬೇಕಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದ ವಿಶ್ವನಾಥ್- ಇಂತದ್ದನ್ನೆಲ್ಲ ನೋಡಿಕೊಳ್ಳಲು ನಮ್ಮ ಪೂಜಾರಿ ಇದ್ದಾರೆ ಎಂದರು. ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕೆ.ಆರ್.ನಗರ ಕ್ಷೇತ್ರದಿಂದ ಸ್ಪರ್ಧಿಸುವಂತೆ ನಾನು ಮುಖ್ಯಮಂತ್ರಿ ಕೃಷ್ಣ ಅವರನ್ನು ಆಹ್ವಾನಿಸುವುದಿಲ್ಲ. ಅವರಾಗಿ ಸ್ಪರ್ಧಿಸುವುದಾದರೆ ಸ್ವಾಗತ. ಸುಮ್ಮನಿರಲಾಗದ ಕೆಲವರು ತಮ್ಮ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಹೇಳುತ್ತಾರೆ. ತಮ್ಮ ಕ್ಷೇತ್ರಕ್ಕೆ ಸ್ಪರ್ಧಿಸಲು ಮುಖ್ಯಮಂತ್ರಿ ಬರುವುದಿಲ್ಲ ಎಂದು ಚೆನ್ನಾಗಿ ಗೊತ್ತಿದ್ದವರು ಈ ಕೆಲಸ ಮಾಡುತ್ತಾರೆ. ಮುಖ್ಯಮಂತ್ರಿ ಹಿಂದಿನಿಂದಲೂ ಮದ್ದೂರಿನಿಂದ ಸ್ಪರ್ಧಿಸುತ್ತಿದ್ದಾರೆ. ಅವರು ಬೆಂಗಳೂರು ಅಭಿವೃದ್ಧಿಗೆ ಕಾರಣಕರ್ತರಾಗಿರುವುದರಿಂದ ಇಲ್ಲಿಯೂ ಸ್ಪರ್ಧಿಸಬಹುದು. ಬೇಕಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಅವರು ಹೇಳಿದರು. ಇತ್ತೀಚೆಗಷ್ಟೇ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಚಿವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದರು.
ಪಕ್ಷಕ್ಕೆ ಬಂದಿರುವ ನಾಯಕರ ಬಗೆಗಿನ ಆಂತರಿಕ ಅಸಮಾಧಾನ ಶಮನಕ್ಕೆ ಕೃಷ್ಣರೇ ಸೂಕ್ತ ವ್ಯಕ್ತಿ. ಸಮನ್ವಯಗೊಳಿಸುವ ಉಸ್ತುವಾರಿ ಅವರು ವಹಿಸುವುದು ಒಳಿತು ಎಂದು ವಿಶ್ವನಾಥ್ ಅಭಿಪ್ರಾಯಪಟ್ಟರು.
ಇತ್ತೀಚೆಗೆ ಪ್ರಗತಿಪರ ಜನತಾದಳದ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆ ಹೊಂದಿದ ಕುರಿತು ಪ್ರತಿಕ್ರಿಯಿಸಿದ ವಿಶ್ವನಾಥ್- ಕಾಂಗ್ರೆಸ್ಸನ್ನು ಪಕ್ಷವೆನ್ನುವ ಬದಲು ಒಂದು ಜನಾಂದೋಲನ ಎನ್ನುವುದು ಸೂಕ್ತ. ಪಕ್ಷಕ್ಕೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications