‘ವಾಜಪೇಯಿ ಹೇಳುವುದು ಒಂದು ಮಾಡುವುದು ಇನ್ನೊಂದು...’
‘ವಾಜಪೇಯಿ ಹೇಳುವುದು ಒಂದು ಮಾಡುವುದು ಇನ್ನೊಂದು...’
ಪ್ರಧಾನಿ ಹೇಳೋದೆಲ್ಲ ಓಳು, ಬರೀ ಓಳು ಎಂದ ಕಾಂಗ್ರೆಸ್
ಲಕ್ನೋ ಚುನಾವಣಾ ಭಾಷಣದಲ್ಲಿ ಪ್ರಧಾನಿ ವಾಜಪೇಯಿ ರಾಜಕಾರಣದ ಅಪರಾಧೀಕರಣವನ್ನು ವಿರೋಧಿಸುವುದ್ನು ತಮ್ಮ ರಾಜಕೀಯ ಸಿದ್ಧಾಂತದ ಒಂದು ತತ್ವವೆಂದು ಬಣ್ಣಿಸಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು - ಗುಜರಾತಿನಲ್ಲಿ ರಾಜಧರ್ಮದ ಕುರಿತು ಮಾತನಾಡಿ ಕೋಮುಗಲಭೆ ನಡೆಸಿದ ಮೋದಿ ಸರಕಾರಕ್ಕೆ ಅಧಿಕಾರ ಮುಂದುವರಿಸಲು ವಾಜಪೇಯಿ ಹಸಿರು ನಿಶಾನೆ ತೋರಿಸಿದರು. ಅಭಿವೃದ್ಧಿಯ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇವೆ ಎಂದ ಮರುದಿನ ರಾಮಮಂದಿರದ ವಿಷಯ ಎತ್ತಿದರು . ಇವು ವಾಜಪೇಯಿ ಅವರ ದ್ವಂದ್ವನೀತಿಗೆ ಸಾಕ್ಷಿ ಎಂದು ಕಾಂಗ್ರೆಸ್ ವಕ್ತಾರ ಆನಂದ ಶರ್ಮ ಮಂಗಳವಾರ ಹೇಳಿದ್ದಾರೆ.
ಅಧಿಕಾರಕ್ಕೆ ಬರುವ ಮುನ್ನ, ಈ ಮುನ್ನ ಆಡಳಿತ ನಡೆಸಿದ ಪಕ್ಷಗಳಿಗಿಂತ ಬಿಜೆಪಿ ವಿಭಿನ್ನವಾಗಿದೆ, ಪರಿಶುದ್ಧ ರೀತಿಯ ಬದಲಾವಣೆ ತರಲಿದೆ ಎಂದೆಲ್ಲಾ ವಾಜಪೇಯಿ ಬೂಸಿ ಬಿಟ್ಟಿದ್ದರು. ಈಗ ರಾಜಕೀಯದ ಅಪರಾಧೀಕರಣದ ಕುರಿತು ಲಕ್ನೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ, ಅಪರಾಧದ ಹಿನ್ನಲೆಯ ಡಿ.ಪಿ.ಯಾದವ್ರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಆನಂದ ಶರ್ಮ ಕಟಕಿಯಾಡಿದರು.
ಈ ಮಧ್ಯೆ ಸಮಸ್ಯಾತ್ಮಕ ಡಿ.ಪಿ.ಯಾದವ್ರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಲಾಗಿದೆ. ಪ್ರಧಾನಿ ಮತ್ತು ಉಪಪ್ರಧಾನಿ ಜೊತೆ ಚರ್ಚಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯನಾಯ್ಡು ತಿಳಿಸಿದ್ದಾರೆ. ಯಾದವ್ ಕೆಲದಿನಗಳ ಹಿಂದೆಯಷ್ಟೆ ೕ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿಕೊಂಡಿದ್ದರು. ಡಿಪಿ ಯಾದವ್ ಮೇಲೆ ಕೊಲೆ , ಅಪಹರಣದಂತಹ ಆರೋಪಗಳಿವೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications