ರಾಜಕೀಯವಾಗಿ ಮುಗಿಸಲು ಕೈ- ಕಮಲ ಸಂಚು : ದೇವೇಗೌಡ
ರಾಜಕೀಯವಾಗಿ ಮುಗಿಸಲು ಕೈ- ಕಮಲ ಸಂಚು : ದೇವೇಗೌಡ
ಕೃಷ್ಣರ ಭ್ರಷ್ಟ ಸರಕಾರ ಕಿತ್ತು ತೆಗೆಯುವುದೇ ಜೀವನದ ಗುರಿಯೆಂದ ಮಾಜಿ ಪ್ರಧಾನಿ
ಮುಖ್ಯಮಂತ್ರಿ ಎಸ್ಸೆಂ. ಕೃಷ್ಣ , ತಮ್ಮ ಸರಕಾರದ ಭ್ರಷ್ಟಾಚಾರ ವಿರುದ್ಧ ಮಾತನಾಡದಂತೆ ಬಲಪ್ರಯೋಗಿಸಿ ನನ್ನನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರಿಂದ ನನ್ನನ್ನು ಮೂಕಪಶು ಮಾಡಲು ಸಾಧ್ಯವಿಲ್ಲ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ, ಭ್ರಷ್ಟಾಚಾರ ಮತ್ತಿತರ ಕುರಿತಾದ 9 ಕೇಸುಗಳಲ್ಲಿ ಇತ್ತೀಚೆಗೆ ನಾನು ದೋಷಮುಕ್ತ ಎಂದು ಸಾಬೀತಾಗಿದೆ. ಇನ್ನೂ ನನ್ನನ್ನು ರಾಜಕೀಯವಾಗಿ ಅಂತ್ಯ ಮಾಡಲು ಅವರು ಹವಣಿಸುತ್ತಿದ್ದಾರೆ ಎಂದು ದೇವೇಗೌಡರು- ಜೆಡಿಎಸ್ ಅಧಿಕಾರಕ್ಕೆ ಬಂದರೆ ಕಾಂಗೈ ನಡೆಸಿದ ಭ್ರಷ್ಟಾಚಾರದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಪುನರುಚ್ಛರಿಸಿದರು.
ನನ್ನನ್ನು ಬಲಿಪಶು ಮಾಡಲು ಅವರಿಗೆ ಸಾಧ್ಯವಿಲ್ಲ. ಅತ್ಯಂತ ಭ್ರಷ್ಟವಾದ ಕೃಷ್ಣ ಸರಕಾರದ ವಿದುದ್ಧ ಹೋರಾಡಿ ಆ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಜೀವನದ ಗುರಿ ಎಂದು ಗೌಡ ನುಡಿದರು.
ಬಡ ರೈತರಿಗೆ ಸಹಾಯ ಆಗುವಂತೆ ಬೆಂಗಳೂರು-ಮೈಸೂರು ಚರ್ತುಭುಜ ರಸ್ತೆಯ ಭೂಕಬಳಿಕೆ ಪ್ರಕರಣವನ್ನು ನಾನು ಹೊರಹಾಕಿದೆ. ಅವರು ನನ್ನ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದ ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕುರಿತು ಪ್ರತಿಕ್ರಿಯಿಸಿ- ನಾನು ನನ್ನ ಎಲ್ಲಾ ದಾಖಲೆಗಳನ್ನು ಮಕ್ತ ವಾಗಿ ಸ್ವಯಂ ಆಸ್ತಿ ಘೋಷಣೆ ಅಡಿಯಲ್ಲಿ ತೆರಿಗೆ ಇಲಾಖೆಗೆ ಸಲ್ಲಿಸಿದ್ದೇನೆ. ಒಂದು ರೂಪಾಯಿ ಎಲ್ಲಿಯಾದರು ಬಾಕಿ ಇದ್ದರೆ ಅವರು ನನ್ನ ಜೈಲಿಗೆ ಕಳುಹಿಸಲಿ ಅಥವಾ ಮರಣದಂಡನೆ ವಿಧಿಸಲಿ ಎಂದರು.
ಭಾರತ ಪ್ರಕಾಶಿಸುತ್ತಿದೆ ಎನ್ನುವ ಎನ್ಡಿಎ ಸರ್ಕಾರದ ಹೇಳಿಕೆಯನ್ನು ಟೀಕಿಸಿದ ದೇವೇಗೌಡರು, ದೇಶದಲ್ಲಿ 65 ಕೋಟಿಗೂ ಹೆಚ್ಚು ಮಂದಿ ಬಡತನದಿಂದ ನರಳುತ್ತಿದ್ದಾರೆ ಎಂದು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications