Get Updates
Get notified of breaking news, exclusive insights, and must-see stories!

ಕೇಂದ್ರದಿಂದ ಮುಖ್ಯಮಂತ್ರಿ ಕೃಷ್ಣರ ಫೋನ್‌ ಕದ್ದಾಲಿಕೆ -ಮೊಯ್ಲಿ

ಕೇಂದ್ರದಿಂದ ಮುಖ್ಯಮಂತ್ರಿ ಕೃಷ್ಣರ ಫೋನ್‌ ಕದ್ದಾಲಿಕೆ -ಮೊಯ್ಲಿ
ಕಾಂಗ್ರೆಸ್‌ನಿಂದ ಚುನಾವಣಾ ವಿಷಯವಾಗಿ ಫೋನ್‌ ಕದ್ದಾಲಿಕೆ ಪ್ರಕರಣ

ಬೆಂಗಳೂರು : ಪ್ರಮುಖ ರಾಜಕೀಯ ಬೆಳವಣಿಗೆಯಾಂದರಲ್ಲಿ , ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸೇರಿದಂತೆ ರಾಜ್ಯದಲ್ಲಿನ 60 ಕಾಂಗ್ರೆಸ್‌ ನಾಯಕರ ದೂರವಾಣಿಗಳನ್ನು ಕೇಂದ್ರ ಸರ್ಕಾರ ಕದ್ದಾಲಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಆಪಾದಿಸಿದೆ.

ಮುಖ್ಯಮಂತ್ರಿ ಕೃಷ್ಣ , ಮುಖ್ಯಮಂತ್ರಿಗಳ ಸಿಬ್ಬಂದಿ, ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಮತ್ತಿತರ ನಾಯಕರ ದೂರವಾಣಿಗಳನ್ನು ಸತತವಾಗಿ ಕದ್ದಾಲಿಸಲಾಗುತ್ತಿದೆ. ರಾಜ್ಯ ಬಿಜೆಪಿ ಚುನಾವಣಾ ತಂತ್ರವನ್ನು ರೂಪಿಸಲಿಕ್ಕಾಗಿ ಈ ಕದ್ದಾಲಿಕೆ ನಡೆಸಲಾಗುತ್ತಿದೆ. ಕದ್ದಾಲಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಫೆ.26ರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮತ್ತು ಕಾಂಗ್ರೆಸ್‌ ವಕ್ತಾರ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದರು.

ದೂರವಾಣಿ ಕದ್ದಾಲಿಕೆಯ ಕುರಿತು ಕಾನೂನು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲು ನಿರಾಕರಿಸಿದ ವೀರಪ್ಪ ಮೊಯಿಲಿ- ಪ್ರಕರಣವನ್ನು ಚುನಾವಣಾ ವಿಷಯವನ್ನಾಗಿ ಬಳಸಿಕೊಳ್ಳಲಾಗುವುದು ಎಂದರು.

ದೂರವಾಣಿ ಕದ್ದಾಲಿಕೆ ಕುರಿತು ಕೆಪಿಸಿಸಿ ಅಧ್ಯಕ್ಷರು ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಪಕ್ಷದ ನಾಯಕರು ದೂರವಾಣಿ ಬಳಕೆಯನ್ನೇ ಕಡಿಮೆ ಮಾಡಿದ್ದಾರೆ ಎನ್ನಲಾಗಿದೆ.

(ಪಿಟಿಐ)

Post your views

ಮುಖಪುಟ / ಕೃಷ್ಣಗಾರುಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+