ಟಿಕೆಟ್ ಹಂಚಿಕೆಯಿಂದ ಡಿಕೇಶಿ ದೂರವಿಡಿ -ಎಚ್. ವಿಶ್ವನಾಥ್
ಟಿಕೆಟ್ ಹಂಚಿಕೆಯಿಂದ ಡಿಕೇಶಿ ದೂರವಿಡಿ -ಎಚ್. ವಿಶ್ವನಾಥ್
ಕೃಷ್ಣ ಸ್ವಾತಂತ್ರೋತ್ತರ ಭಾರತದ ಒಳ್ಳೆಯ ನಾಯಕ...
ಸರ್ವಾಧಿಕಾರಿಯಂತೆ ವರ್ತಿಸುವ ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ ಅವರನ್ನು ಟಿಕೆಟ್ ಹಂಚಿಕೆ ಕಾರ್ಯದಿಂದ ಹೊರಗಿಡಬೇಕು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಟಿಕೆಟ್ ಹಂಚಿಕೆಯ ಸಮಸ್ಯೆ ಬಗೆಹರಿಸಲು ಶಕ್ತಿ ಮೀರಿ ಕೆಲಸ ಮಾಡುತ್ತಿದೆ. ಈ ಪ್ರಕ್ರಿಯೆಯಿಂದ ಶಿವಕುಮಾರ್ ಅವರನ್ನು ದೂರವಿಡಬೇಕು ಎಂದು ಸಹಕಾರಿ ಸಚಿವ ಎಚ್.ವಿಶ್ವನಾಥ್ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಕೆಲವು ತಿಂಗಳಿಂದ ಶಿವಕುಮಾರ್ ಕಾರ್ಯವೈಖರಿಯನ್ನು ನಾನು ಇಷ್ಟಪಡುತ್ತಿಲ್ಲ. ಈ ಕುರಿತು ಹೈಕಮಾಂಡ್ ಟಿಕೆಟ್ ಹಂಚಿಕೆ ಮೇಲ್ವಿಚಾರಕ ಸಮಿತಿಗೆ ದೂರು ನೀಡುತ್ತೇನೆ ಎಂದು ಹಿಂದುಳಿದ ವರ್ಗದ ಪ್ರಬಲ ನಾಯಕರಾದ ವಿಶ್ವನಾಥ್ ಹೇಳಿದರು. ಪಕ್ಷದಲ್ಲಿ ಕೆಲವರು ಪುಡಿ ನಾಯಕರು ಬೆಳೆದಿದ್ದಾರೆ. ಅವರ ಬಗ್ಗೆ ಪಕ್ಷ ಎಚ್ಚರದಿಂದಿರಬೇಕು. ಇಲ್ಲದಿದ್ದರೆ ಪಕ್ಷಕ್ಕೆ ಹಾನಿಯುಂಟಾಗುತ್ತದೆ ಎಂದು ವಿಶ್ವನಾಥ್ ಎಚ್ಚರಿಸಿದರು.
ಕೃಷ್ಣ ಅವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ವಿಶ್ವನಾಥ್- ಕಳೆದ ನಾಲ್ಕು ವರ್ಷಗಳಿಂದ ಅವರು ನಮ್ಮ ನಾಯಕ. ಸ್ವಾತಂತ್ರೋತ್ತರ ಭಾರತದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ನಾಯಕ ಎಂದು ಬಣ್ಣಿಸಿದರು.
ಗೆಲ್ಲುವ ಸಾಮರ್ಥ್ಯದೊಂದಿಗೆ ಸಾಮಾಜಿಕ ನ್ಯಾಯವನ್ನೂ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಕೆಪಿಸಿಸಿ ಪರಿಗಣಿಸಬೇಕು ಎಂದು ವಿಶ್ವನಾಥ್ ಹೇಳಿದರು. ಗೆಲ್ಲುವ ಸಾಮರ್ಥ್ಯವಿದ್ದವರಿಗೆ ಮಾತ್ರ ಟಿಕೆಟ್ ಎನ್ನುವ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರ ಹೇಳಿಕೆಗೆ ವಿಶ್ವನಾಥ್ ಅವರ ಪ್ರತಿಕ್ರಿಯೆಯಿದು.
ಬಂಗಾರಪ್ಪನವರ ಕುರಿತು ಅವರು ‘ಸಾಂಪ್ರದಾಯಿಕ ಅಸುಂತಷ್ಟ’ರು ಎಂದು ಬಣ್ಣಿಸಿದ ವಿಶ್ವನಾಥ್- ಬಂಗಾರಪ್ಪನವರ ನಿರ್ಗಮನದಿಂದಾಗಿ ಪಕ್ಷಕ್ಕೆ ಹಾನಿ ಉಂಟಾಗುವುದಿಲ್ಲ ಎಂದು ನಾನು ಹೇಳಲಾರೆ. ಆದರೆ ಈ ಕೊರತೆಯನ್ನು ತುಂಬಲು ಪಕ್ಷ ತಂತ್ರಗಾರಿಕೆ ರೂಪಿಸಲಿದೆ ಎಂದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications