ರಾಜಕಾರಣಿ ಆಗದಿದ್ದರೆ ವಾಜಪೇಯಿ ಬೇರೆ ಏನಾಗುತ್ತಿದ್ದರು ?
ರಾಜಕಾರಣಿ ಆಗದಿದ್ದರೆ ವಾಜಪೇಯಿ ಬೇರೆ ಏನಾಗುತ್ತಿದ್ದರು ?
ವಾಜಪೇಯಿ ಕವಿತೆಗಳ ಕನ್ನಡ, ತೆಲುಗು, ಮಲಯಾಳಿ ಭಾಷಾನುವಾದ ಪ್ರಕಟ
ನಾನು ಒಬ್ಬ ಕವಿಯಾಗಬಲ್ಲೆ ಎಂದು ಯಾವತ್ತೂ ಅಂದುಕೊಂಡಿಲ್ಲ. ಆದರೆ ಪತ್ರಕರ್ತನಾಗಬೇಕೆಂಬ ಹಂಬಲವಿತ್ತು. ಆದರೆ ಅವೆರಡೂ ಅಲ್ಲದೆ ರಾಜಕಾರಣಿಯಾಗಿ ಬಿಟ್ಟೆ ಎಂದು ಕಾಂಗ್ರೆಸೇತರ ಪೂರ್ಣಾವಧಿ ಸರಕಾರ ನಡೆಸಿದ ದೇಶದ ಪ್ರಥಮ ಪ್ರಧಾನಿ ಹೇಳಿದರು. ಅವರು ತಮ್ಮ ಕವಿತೆಗಳ ಕನ್ನಡ, ತೆಲುಗು, ಮಲಯಾಳಿ ಭಾಷಾನುವಾದ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಈ ಪುಸ್ತಕಗಳು ಯೋಜನಾ ಆಯೋಗದ ಸದಸ್ಯ ವೆಂಕಟಸುಬ್ರಹ್ಮಣ್ಯನ್ ಸಂಪಾದಕತ್ವದಲ್ಲಿ ಪ್ರಕಟಗೊಂಡಿದೆ. ತಮಿಳು ಅವತರಣಿಕೆ ಈ ಹಿಂದೆಯೇ ಪ್ರಕಟಗೊಂಡಿತ್ತು.
ಭಾರತ ಬಹುಭಾಷೀಯ ರಾಷ್ಟ್ರ. ಆದ್ದರಿಂದ ಯಾವುದೇ ಭಾಷೆಯ ಪ್ರಶಂಸಾತ್ಮಕ ಕೃತಿಗಳು ತಕ್ಷಣ ಇತರ ಭಾಷೆಗೆ ಭಾಷಾಂತರಗೊಳ್ಳಬೇಕು ಎಂದು ವಾಜಪೇಯಿ ಅಭಿಪ್ರಾಯಪಟ್ಟರು.
ನಾನು ಕೆಲವೇ ದಿನಗಳು ಸರಕಾರ ನಡೆಸಿರಬಹುದು. ಆದರೆ ಶೋಷಿತ ವರ್ಗಕ್ಕೆ ಸಹಾಯ ಮಾಡಲು ಹೊರಟಾಗ ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ‘ವಾಜಪೇಯಿ ಕವಿಯೇ’ ಎಂಬ ಸೋನಿಯಾ ಗಾಂಧಿ ಟೀಕೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸುತ್ತಾ ಹೇಳಿದರು.
ವಾಜಪೇಯಿ ಕೃತಿಗಳನ್ನು ಭಾರತೀಯ ಭಾಷೆಗಳಿಗೆ ಮಾತ್ರವಲ್ಲ , ವಿದೇಶಿ ಭಾಷೆಗಳಿಗೂ ಭಾಷಾಂತರ ಮಾಡಲಾಗುವುದು. ಕವಿಯ ಅಂತಃಸತ್ವ ಪ್ರಜ್ವಲಿಸುವಂತೆ ಅನುವಾದಿಸಲಾಗುವುದು ಎಂದು ಕೇಂದ್ರ ಸಚಿವ ಮುರಳಿಮನೋಹರ ಜೋಷಿ ಹೇಳಿದರು. ಈ ಸಂದರ್ಭದಲ್ಲಿ ಯೋಜನಾ ಆಯೋಗದ ಉಪಾಧ್ಯಕ್ಷ ಕೆ.ಸಿ.ಪಂತ್ ಹಾಜರಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications