ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬರ ಕಾಮಗಾರಿಗಳಲ್ಲಿ ಸಚಿವರ ಪಾಲ್ಗೊಳ್ಳುವಿಕೆಗೆ ಕೃಷ್ಣ ವಕಾಲತ್ತು

By Super
|
Google Oneindia Kannada News

ಬೆಂಗಳೂರು : ಬರ ಪರಿಹಾರ ಕಾರ್ಯಕ್ರಮಗಳಲ್ಲಿ ಸಚಿವರನ್ನು ತೊಡಗಿಸಿಕೊಳ್ಳಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಸತತ ಮೂರು ವರ್ಷಗಳಿಂದ ಬರಗಾಲವಿದ್ದು , ಬರ ಪರಿಹಾರ ಕಾರ್ಯಕ್ರಮಗಳಲ್ಲಿ ಸಚಿವರ ಭಾಗವಹಿಸುವಿಕೆ ಅಗತ್ಯವಾಗಿದೆ. ಆ ಕಾರಣದಿಂದಾಗಿ ಪರಿಹಾರ ಕಾಮಗಾರಿಗಳಲ್ಲಿ ಸಚಿವರು ಭಾಗವಹಿಸುವುದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆಯೇ ಎನ್ನುವ ಕುರಿತು ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿ ಕೃಷ್ಣ ಚುನಾವಣಾ ಆಯೋಗವನ್ನು ಕೋರಿದ್ದಾರೆ. ಈ ವಿಷಯವನ್ನು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೃಷ್ಣ ತಿಳಿಸಿದರು. ಎಲ್ಲ ಕಾರ್ಯಕ್ರಮಗಳನ್ನು ಅಧಿಕಾರಿಗಳ ಮೂಲಕವೇ ಜಾರಿಗೊಳಿಸುವಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕೃಷ್ಣ ಈ ಪತ್ರ ಬರೆದಿದ್ದಾರೆ.

ಕುಡಿಯುವ ನೀರು ಸರಬರಾಜು, ಜಾನುವಾರುಗಳಿಗೆ ಮೇವು, ಉದ್ಯೋಗ ಸೃಷ್ಟಿ ಮುಂತಾದ ಬರ ಪರಿಹಾರ ಕಾಮಗಾರಿಗಳಲ್ಲಿ ಸಚಿವರು ಪಾಲ್ಗೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಸಕ್ರಿಯವಾಗಿದ್ದರೂ, ಸಚಿವರ ಮೇಲುಸ್ತುವಾರಿ ಹಾಗೂ ನಿಯಂತ್ರಣ ಬೇಕಾಗಿದೆ. ಆದುದರಿಂದ ಚುನಾವಣಾ ಆಯೋಗದ ಅನುಮತಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಕೃಷ್ಣ ಹೇಳಿದರು.

ಕಳೆದ ವಾರವಷ್ಟೇ ಮುಖ್ಯ ಚುನಾವಣಾ ಆಯುಕ್ತ ಟಿ.ಎಸ್‌.ಕೃಷ್ಣಮೂರ್ತಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಕಾರ್ಯಗಳನ್ನು ವೀಕ್ಷಿಸಿದ್ದರು. ಈ ಸಂದರ್ಭದಲ್ಲಿ ಸಚಿವರನ್ನು ಕಾಮಗಾರಿಗಳಿಂದ ದೂರವಿಡುವಂತೆ ಕೃಷ್ಣಮೂರ್ತಿ ನಿರ್ದೇಶಿಸಿದ್ದರು.(ಪಿಟಐ)

English summary
S M Krishna dashed off a letter to the Election Commission seeking permission for involving ministers in overseeing scarcity relief works in the state, reeling under drought for the third consecutive year
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X