ಕೊಲೆ ಪ್ರಕರಣದಿ ಮಾಜಿ ಮುಖ್ಯಮಂತ್ರಿದೇವರಾಜಅರಸು ಪುತ್ರಿ
ಕೊಲೆ ಪ್ರಕರಣದಿ ಮಾಜಿ ಮುಖ್ಯಮಂತ್ರಿದೇವರಾಜಅರಸು ಪುತ್ರಿ
ಚಿತ್ರಲೇಖಾ ಕೊಲೆ ಪ್ರಕರಣದಲ್ಲಿ ಜಾತ್ಯತೀತ ಜನತಾದಳದ ಭಾರತಿ ಅರಸು ಬಂಧನ
ಸುಮಾರು ಒಂದೂವರೆ ತಿಂಗಳ ಹಿಂದೆ ನಿಗೂಢ ರೀತಿಯಲ್ಲಿ ಕಾಣೆಯಾಗಿದ್ದ ಚಿತ್ರಲೇಖಾ ಅವರ ಶವ ಸಕಲೇಶಪುರದ ಶಿರಾಡಿ ಘಾಟ್ ಸಮೀಪ ಪತ್ತೆಯಾಗಿದೆ. ಚಿತ್ರಲೇಖಾ ಅವರು ನಿವೃತ್ತ ನ್ಯಾಯಮೂರ್ತಿ ಚಂದ್ರಕಾಂತ ರಾಜ ಅರಸ್ ಅವರ ಪುತ್ರಿ.
ಚಿತ್ರಲೇಖಾ ಅವರ ಕೊಲೆಯ ಸಂಬಂಧ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರ ಪುತ್ರಿ ಭಾರತಿ ಅರಸ್ ಹಾಗೂ ಇನ್ನಿಬ್ಬರನ್ನು ಬಂಧಿಸಲಾಗಿದೆ. ಭಾರತಿ ಅವರ ನಿರ್ದೇಶನದಂತೆಯೇ ಈ ಕೊಲೆ ನಡೆದಿದೆ. ಮಧುಕುಮಾರ್ ಹಾಗೂ ಚಂದ್ರಕಾಂತ್ ಎನ್ನುವವರು ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿತ್ರಲೇಖಾ ಅವರಿಂದ 65 ಲಕ್ಷ ರುಪಾಯಿಗಳನ್ನು ಭಾರತಿ ಅರಸ್ ಸಾಲವಾಗಿ ಪಡೆದಿದ್ದು , ಸಾಲ ತೀರಿಸುವ ಒತ್ತಡ ಹೆಚ್ಚಾದಾಗ ಕೊಲೆಯ ಸಂಚು ರೂಪಿಸಿದ್ದಾರೆ. ಜ.19ರಂದು ಬೆಂಗಳೂರಿನ ಪಾಮ್ಗ್ರೂಪ್ ಆವರಣದಲ್ಲೇ ಚಿತ್ರಲೇಖಾ ಅವರ ಕೊಲೆ ನಡೆದಿದ್ದು , ಆನಂತರ ಶವವನ್ನು ಶಿರಾಡಿ ಘಾಟ್ನಲ್ಲಿ ಎಸೆದಿದ್ದಾರೆ. ಕಿವಿಯ ಓಲೆಯಿಂದ ಶವದ ಗುರುತು ಪತ್ತೆ ಹಚ್ಚಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತಿ ಅರಸ್ ಮತ್ತು ಉಳಿದಿಬ್ಬರು ಆರೋಪಿಗಳ ಮೇಲೆ ಕಣ್ಣಿಟ್ಟಿದ್ದ ಪೊಲೀಸರು, ಆರೋಪಿಗಳ ದೂರವಾಣಿ ಸಂಭಾಷಣೆಯನ್ನು ಆಲಿಸುವ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎಸ್.ಮರಿಸ್ವಾಮಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications