ಸಾಧನೆಗಳ ಬುತ್ತಿಯಾಂದಿಗೆ ‘ವಿಜಯದುಂದುಭಿ’ ಮೊಳಗಿಸಿದ ಕೃಷ್ಣ
ಸಾಧನೆಗಳ ಬುತ್ತಿಯಾಂದಿಗೆ ‘ವಿಜಯದುಂದುಭಿ’ ಮೊಳಗಿಸಿದ ಕೃಷ್ಣ
ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಅಸಾಧ್ಯ
ಕೃಷ್ಣ ಅವರ ನಿವಾಸ ಅನುಗ್ರಹದಿಂದ, ಮಾ.18ರ ಗುರುವಾರ ಬೆಳಗ್ಗೆ ‘ವಿಜಯ ದುಂದುಭಿ’ ಯಾತ್ರೆ ಪ್ರಾರಂಭವಾಯಿತು. ಮತ್ತೊಂದು ಅವಧಿಯ ಅಧಿಕಾರದ ನಿರೀಕ್ಷೆಯಲ್ಲಿ ಪ್ರಾರಂಭವಾದ ‘ವಿಜಯ ದುಂದುಭಿ’ ಯಾತ್ರೆಯಲ್ಲಿ ಮುಖ್ಯಮಂತ್ರಿ ಕೃಷ್ಣ ಅವರೊಂದಿಗೆ ಅವರ ಪತ್ನಿ ಪ್ರೇಮಾ ಕೃಷ್ಣ , ಸಂಪುಟ ಸಹೋದ್ಯೋಗಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಇದ್ದಾರೆ.
ಮೊದಲ ಹಂತದ ‘ವಿಜಯ ದುಂದುಭಿ’ ಯಾತ್ರೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಕೃಷ್ಣ ಕ್ರಮಿಸಲಿದ್ದಾರೆ.
ಅಧಿಕಾರ ಗ್ರಹಣಕ್ಕಾಗಿ ಕರ್ನಾಟಕ ದಕ್ಷಿಣ ಭಾರತದ ಹೆಬ್ಬಾಗಿಲು ಎನ್ನುವ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕೃಷ್ಣ - ನಾವು ಅವರನ್ನು ತಡೆಯುತ್ತೇವೆ. ಮುಂದೆಂದೂ ಅಧಿಕಾರ ಸಾಧ್ಯವಾಗದಂತೆ ತಡೆಯುತ್ತೇವೆ ಎಂದರು. ಬಿಜೆಪಿ ಬೇರೆಯವರಿಗೆ ಸಮಸ್ಯೆಯಾಗಿರಬಹುದು, ಆದರೆ ನನಗೆ ಯಾವತ್ತಿಗೂ ಸಮಸ್ಯೆಯಾಗಿಲ್ಲ ಎಂದೂ ಕೃಷ್ಣ ಹೇಳಿದರು.
ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸಲು ಮತ್ತೊಂದು ಅವಧಿಯ ಅಧಿಕಾರ ಅಗತ್ಯವಿದೆ ಎಂದ ಕೃಷ್ಣ , ಮತ್ತೊಮ್ಮೆ ಜನಾಶೀರ್ವಾದ ದೊರೆಯುವ ಕುರಿತು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನ ಗಾಳಿ ಆಂಜನೆಯ ದೇವಸ್ಥಾನದ ಬಳಿ ಮಾತನಾಡಿದ ಕೃಷ್ಣ , ತಮ್ಮ ಸರ್ಕಾರದ ಸಾಧನೆಗಳನ್ನು ಹೇಳಿಕೊಂಡರು. ಸಾಧಿಸಿದ್ದು ಸಾಕಷ್ಟು , ಸಾಧಿಸಬೇಕಾದುದು ಇನ್ನೂ ಇದೆ. ನಗರ ಪ್ರದೇಶಗಳಲ್ಲಿ ಮೂಲಭೂತ ಅವಶ್ಯಕತೆಗಳ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಿದೆ. ಬೆಂಗಳೂರು ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರಗಳಲ್ಲಿ ಒಂದಾಗಿರುವುದು ಸರ್ಕಾರದ ಹೆಮ್ಮೆ ತರುವ ಸಾಧನೆಯಾಗಿದೆ ಎಂದು ಕೃಷ್ಣ ಬಣ್ಣಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications