ಸಾಕಿನ್ನು ನೆಹರು, ಇಂದಿರಾ, ರಾಜೀವ್ರ ಭಜನೆ -ಭಾಜಪ ಆಗ್ರಹ
ಸಾಕಿನ್ನು ನೆಹರು, ಇಂದಿರಾ, ರಾಜೀವ್ರ ಭಜನೆ -ಭಾಜಪ ಆಗ್ರಹ
ಮಾಜಿ ಪ್ರಧಾನಿಗಳ ಹೆಸರು ಬಳಕೆ ನಿಷೇಧಿಸಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ
ಈ ಮೂವರು ಮಾಜಿ ಪ್ರಧಾನಿಗಳ ಹೆಸರಲ್ಲಿ ಸರಕಾರದ ಹಲವು ಯೋಜನೆಗಳು ಜಾರಿಗೆಯಲ್ಲಿ ಇರುವುದರಿಂದ ಅವರ ಹೆಸರಿನ ಬಳಕೆಯನ್ನು ನಿಷೇಧಿಸಬೇಕೆಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ.
ದೇಶದ ಹಲವೆಡೆ ಜಿಲ್ಲೆ ,ತಾಲೂಕು, ಹಳ್ಳಿಗಳಲ್ಲಿ ಆ ಮನೆತನದ ಹೆಸರನ್ನು ಖ್ಯಾತಿಪಡಿಸುವ ಈ ಮಾಜಿ ಪ್ರಧಾನಿಗಳ ಹೆಸರಿದ್ದ ಪ್ರಚಾರ ಭಿತ್ತಿಪತ್ರಗಳು, ಬ್ಯಾನರ್ ಮುಂತಾದುವುಗಳನ್ನು ಬಳಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನಗಳು ಇವುಗಳನ್ನು ಕೀಳಿಸಲು ಆದೇಶ ನೀಡಬಹುದೆ ಎಂದು ಕಾದು ನೋಡಬೇಕಾಗಿದೆ ಎಂದು ಬಿಜೆಪಿ ವಕ್ತಾರ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದರು.
ಬಿಜೆಪಿ ಅಧಿಕಾರವಿದ್ದ ರಾಜ್ಯ ಅಥವಾ ಕೇಂದ್ರದಲ್ಲಿ ಯಾವುದೇ ಸರಕಾರಿ ಯೋಜನೆಗೆ ಪಕ್ಷದ ವ್ಯಕ್ತಿಯ ಅಥಾವ ಮನೆತನದ ಹೆಸರಿಟ್ಟಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವಾಗ ಜಾರಿಗೆ ತಂದ ಯೋಜನೆಗಳಿಗೆ ಇಂದಿರಾ ಆವಾಜ್, ಜವಾಹರ್ ರೋಜಗಾರ್ ಎಂದೆಲ್ಲ ಹೆಸರಿಟ್ಟಿದೆ. ಅದು ಅವರ ಫ್ಯೂಡಲ್ ವ್ಯವಸ್ಥೆಯನ್ನು ತೋರಿಸುತ್ತದೆ ಎಂದು ನಕ್ವಿ ಹೇಳಿದರು.
ಈ ಹಿಂದೆಯೇ ಎನ್ಡಿಎ ಚುನಾವಣಾ ಆಯೋಗದ ನಿರ್ದೇಶನ ತತ್ವಗಳನ್ನು ಬದಲಾಯಿಸುವಂತೆ ಒತ್ತಾಯಿಸಿದೆ. ಈಗಿರುವ ನಿರ್ದೇಶನಗಳನ್ನು ಜಾರಿಗೆ ತರುವಾಗ ವ್ಯಕ್ತಿ ನಿಷ್ಠವಾಗಿ ಬೇಕಾದಂತೆ ಬಳಸಿಕೊಳ್ಳಬಹುದಾಗಿದೆ. ಇದು ಅಸಮಾನತೆಗೆ ಎಡೆಮಾಡಿಕೊಡುತ್ತದೆ. ಅದಕ್ಕಾಗಿ ನಾವು ಅದನ್ನು ಮರು ಪರಿಶೀಲಿಸುವಂತೆ ಆಯೋಗವನ್ನು ಕೇಳಿಕೊಂಡಿದ್ದೆವು ಎಂದು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications