ಧರ್ಮಸ್ಥಳ ವೀರೇಂದ್ರಹೆಗ್ಗಡೆಗೆ ತುಳು ಸಾಹಿತ್ಯಅಕಾಡೆಮಿ ಫೆಲೋಶಿಪ್
ಧರ್ಮಸ್ಥಳ ವೀರೇಂದ್ರಹೆಗ್ಗಡೆಗೆ ತುಳು ಸಾಹಿತ್ಯಅಕಾಡೆಮಿ ಫೆಲೋಶಿಪ್
ನಾವಡ, ಅನಂತರಾಮ ಬಂಗಾಡಿ, ಪ್ರಭು, ವಾಮನ, ಬಾಬು ಪರವಗೆ ಪ್ರಶಸ್ತಿ
ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ವೀರೇಂದ್ರ ಹೆಗ್ಗಡೆಯವರು ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ 2003ನೇ ಸಾಲಿನ ಗೌರವ ಫೆಲೋಷಿಪ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ವಾಮನ ನಂದಾವರ ಗುರುವಾರ (ಮಾ.25) ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಕೆಡೆಮಿಯ ಫೆಲೋಷಿಪ್- ಸ್ಮರಣಿಕೆ, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಇದೇ ಸಂದರ್ಭದಲ್ಲಿ 2003ನೇ ಸಾಲಿನ ಅಕಾಡೆಮಿಯ ಗೌರವ ಪ್ರಶಸ್ತಿಗಳಿಗೆ ಐವರನ್ನು ಗುರುತಿಸಲಾಗಿದೆ. ಅವರುಗಳೆಂದರೆ :
ಎಂ.ಎಂ.ಪ್ರಭು (ಸಂಶೋಧನೆ), ಪ್ರೊ.ಎ.ವಿ.ನಾವಡ (ಶಾಸನ), ಕೆ.ಅನಂತರಾಮ ಬಂಗಾಡಿ (ಸಾಹಿತ್ಯ ಮತ್ತು ಗಾಯನ), ಕೆ.ಬಿ.ವಾಮನ (ರಂಗಭೂಮಿ ಮತ್ತು ಸಿನಿಮಾ) ಹಾಗೂ ಬಾಬು ಪರವ (ಜಾನಪದ).
ಪ್ರಶಸ್ತಿಗಳು ತಲಾ 10 ಸಾವಿರ ರುಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿಗಳನ್ನು ಒಳಗೊಂಡಿವೆ. ಜೂನ್ 2ರಂದು ಮಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಾಮನ ನಂದಾವರ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications