Get Updates
Get notified of breaking news, exclusive insights, and must-see stories!

‘ಪಕ್ಷ ’ ಕಾಲದ ವಿರಸ ಅಂತ್ಯ ; ಕುಮಾರ್‌ ಬಂಗಾರಪ್ಪ ಮರಳಿ ‘ಕೈ’ ವಶ

‘ಪಕ್ಷ ’ ಕಾಲದ ವಿರಸ ಅಂತ್ಯ ; ಕುಮಾರ್‌ ಬಂಗಾರಪ್ಪ ಮರಳಿ ‘ಕೈ’ ವಶ
ಅಪ್ಪನನ್ನೂ ಮರಳಿ ಪಕ್ಷಕ್ಕೆ ಕರೆತರಲು ಪ್ರಯತ್ನಿಸುವೆ.....

ನವದೆಹಲಿ : ಅಪ್ಪ ಬಂಗಾರಪ್ಪನವರ ವಿರುದ್ಧ ಸಿಡಿದೆದ್ದಿರುವ ಕುಮಾರ್‌ ಬಂಗಾರಪ್ಪ ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದು , ಪಕ್ಷ ಆದೇಶ ನೀಡಿದಲ್ಲಿ ಸೊರಬದಲ್ಲಿ ತಮ್ಮ ಸಹೋದರನ ವಿರುದ್ಧ ಸ್ಪರ್ಧಿಸಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಉಸಿರು ಕಟ್ಟಿಸುವ ವಾತಾವರಣವಿದೆ. ಆ ಕಾರಣದಿಂದ ಕಾಂಗ್ರೆಸ್‌ಗೆ ಮರಳಿ ಬಂದಿದ್ದೇನೆ. ಅಪ್ಪ ಬಂಗಾರಪ್ಪನವರನ್ನು ಕೂಡ ಕಾಂಗ್ರೆಸ್‌ಗೆ ಮರಳಿ ಕರೆತರಲು ಪ್ರಯತ್ನಿಸುತ್ತೇನೆ ಎಂದು ಶುಕ್ರವಾರ (ಮಾ.26) ನವದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಸಂದರ್ಭದಲ್ಲಿ ಕುಮಾರ್‌ ಬಂಗಾರಪ್ಪ ಹೇಳಿದರು. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ಬಂಗಾರಪ್ಪನವರ ವಿರುದ್ಧ ಪ್ರಚಾರ ಮಾಡುವಿರಾ ಎನ್ನುವ ಸುದ್ದಿಗಾರರಿಗೆ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸದ ಕುಮಾರ್‌ ಬಂಗಾರಪ್ಪ - ಪಕ್ಷದ ಆದೇಶದಂತೆ ನಡೆದುಕೊಳ್ಳುವುದಾಗಿ ಹೇಳಿದರು. ತಾವು ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯವನ್ನು ಕೂಡಾ ಪಕ್ಷವೇ ನಿರ್ಧರಿಸುತ್ತದೆ ಎಂದರು.

ಕಾಂಗ್ರೆಸ್‌ ಪಕ್ಷಕ್ಕೆ ಮರಳಿ ಸೇರಿಸಿಕೊಂಡಿರುವ ಸೋನಿಯಾ ಗಾಂಧಿ ಹಾಗೂ ಮುಖ್ಯಮಂತ್ರಿ ಕೃಷ್ಣರಿಗೆ ಕುಮಾರ್‌ ಬಂಗಾರಪ್ಪ ಧನ್ಯವಾದ ಅರ್ಪಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+