‘ಕಮಲ’ದ ಸಂಗ ತ್ಯಜಿಸಿ ದೇವೇಗೌಡ ದಳದ ‘ಭತ್ತಹೊತ್ತಳು’ ತಾರಕ್ಕ
‘ಕಮಲ’ದ ಸಂಗ ತ್ಯಜಿಸಿ ದೇವೇಗೌಡ ದಳದ ‘ಭತ್ತಹೊತ್ತಳು’ ತಾರಕ್ಕ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅನಂತಕುಮಾರ್ಗೆ ಮುಖಾಮುಖಿ ?
ಬಿಜೆಪಿ ಪಕ್ಷ ಸಂಪೂರ್ಣ ಕೇಸರಿಮಯವಾಗಿದೆ. ರಾಜ್ಯ ಬಿಜೆಪಿಯ ‘ಬಾಸ್’ಗಳು ತಮ್ಮ ಬದುಕನ್ನು ಅತ್ಯಂತ ಆತಂಕಕ್ಕೆ ಒಡ್ಡಿದರು. ಅವರು ಮೋಸಗಾರರು, ತಮ್ಮ ರಾಜಕೀಯ ಭವಿಷ್ಯವನ್ನು ನಾಶ ಮಾಡಲು ಯತ್ನಿಸಿದರು ಎಂದು ಶನಿವಾರ ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದ ತಾರಾದೇವಿ ಆಪಾದಿಸಿದರು.
ದೇಶ ಸೇವೆ ಮಾಡಬಹುದೆನ್ನುವ ಉದ್ದೇಶದಿಂದ ಬಿಜೆಪಿ ಸೇರಿದೆ. ಆದರೆ ಆ ಪಕ್ಷಕ್ಕೆ ನನ್ನಂಥವರ ಅಗತ್ಯವಿಲ್ಲ ಎನ್ನುವುದು ಏಳು ವರ್ಷಗಳ ನಂತರ ತಿಳಿಯಿತು. ನಾನಾಗಿ ಬಿಜೆಪಿಯನ್ನು ತೊರೆಯಲು ಉದ್ದೇಶಿಸಿರಲಿಲ್ಲ . ಆದರೆ ಅವರು ಬಾಗಿಲನ್ನು ತೋರಿಸಿದರು ಎಂದು ತಾರಾದೇವಿ ತಮ್ಮ ಸಂಕಟಗಳನ್ನು ಹೇಳಿಕೊಂಡರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಸೇರಿಸುವ ಉದ್ದೇಶದಿಂದ ಜಾತ್ಯತೀತ ಜನತಾದಳಕ್ಕೆ ಸೇರಿದ್ದೇನೆ ಎಂದ ತಾರಾದೇವಿ- ಬೆಂಗಳೂರು ದಕ್ಷಿಣ ಅಥವಾ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದರು. ತಾರಾದೇವಿ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜಾತ್ಯತೀತ ಜನತಾದಳಕ್ಕೆ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿಯಿಂದ ಹೊರದಬ್ಬಿಸಿಕೊಂಡಿದ್ದ ಗುಂಡಪ್ಪ ವಕೀಲ ಹಾಗೂ ಜಿ.ಕೃಷ್ಣಪ್ಪ ಕೂಡ ಜಾತ್ಯತೀತ ದಳ ಸೇರಿದರು.
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಒಮ್ಮೆ ಪ್ರತಿನಿಧಿಸಿದ್ದ ತಾರಾದೇವಿ, ಪಿ.ವಿ.ನರಸಿಂಹರಾವ್ ಸಂಪುಟದಲ್ಲಿ ಸಚಿವೆಯಾಗಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications