ಪಕ್ಷಾಂತರ ಭೀತಿ! ಪ್ರಕಟವಾಗದ ಪ್ರಮುಖ ಪಕ್ಷಗಳ ಅಭ್ಯರ್ಥಿ ಪಟ್ಟಿ
ಪಕ್ಷಾಂತರ ಭೀತಿ! ಪ್ರಕಟವಾಗದ ಪ್ರಮುಖ ಪಕ್ಷಗಳ ಅಭ್ಯರ್ಥಿ ಪಟ್ಟಿ
ರಾಜ್ಯದ ಪ್ರಮುಖ ಪಕ್ಷಗಳ ಟಿಕೆಟ್ ಹಂಚಿಕೆಯಲ್ಲಿ ಮುಂದುವರಿದ ಭಿನ್ನಾಭಿಪ್ರಾಯ
ಕಾಂಗೈ ಆಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದರೂ ರಾಜ್ಯ ಮುಖಂಡರುಗಳ ಒತ್ತಾಯದ ಮೇರೆಗೆ ಹೈಕಮಾಂಡ್ ಪ್ರಕಟಿಸಿಲ್ಲ. ಈಗಾಗಲೇ ಪ್ರಕಟಿಸಿದ ಕ್ಷೇತ್ರಗಳಲ್ಲಿ ಟಿಕೆಟ್ಸಿಗದ ಮುಖಂಡರು ಪಕ್ಷತೊರೆದಿದ್ದು, ಕೆಲವರು ಬಂಡಾಯ ಎದ್ದಿರುವುದೆ ಇದಕ್ಕೆ ಕಾರಣ ಎಂದು ನಂಬಲಾಗಿದೆ.
ಜಾತ್ಯತೀತ ಜನತಾ ದಳದಲ್ಲಿ ಆಭ್ಯರ್ಥಿಗಳ ಪಟ್ಟಿಯನ್ನು ಔಪಚಾರಿಕವಾಗಿ ಪ್ರಕಟಿಸದೆ ಸುಮಾರು 70 ಕ್ಷೇತ್ರಗಳಲ್ಲಿ ‘ಬಿ’ ಫಾರ್ಮ್ ನೀಡಲಾಗಿದೆ. ಅಂ ತಿಮ ಪ್ರಕಟಣೆಯನ್ನು ಕೊನೆಗಳಿಗೆಯಲ್ಲಿ ಮಾಡುವ ಸಾಧ್ಯತೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಸಿದ್ಧರಾಮಯ್ಯ ತಳ್ಳಿಹಾಕಿಲ್ಲ. ಇದಲ್ಲದೆ ಕಾಂಗೈ ಮತ್ತು ಬಿಜೆಪಿ ಪಟ್ಟಿ ಪ್ರಕಟವಾದೊಡನೆ ಕೆಲ ಮುಖಂಡರು ಪಕ್ಷಾಂತರಗೊಳ್ಳುವ ಸಾಧ್ಯತೆಯನ್ನು ಜೆಡಿಎಸ್ ನಿರೀಕ್ಷಿಸುತ್ತಿದೆ. ಕಾಂಗೈ ಮತ್ತು ಬಿಜೆಪಿಯ ಮೊದಲ ಪಟ್ಟಿ ಪ್ರಕಟವಾದಾಗ ಕೆಲವು ಮುಖಂಡರು ಪಕ್ಷಾಂತರಗೊಂಡಿದ್ದರು.
ಮೊದಲ ಪಟ್ಟಿ ಪ್ರಕಟಿಸಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮುಂತಾದೆಡೆ ಬಂಡಾಯ ಎದುರಿಸುತ್ತಿರುವ ಬಿಜೆಪಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ವಿಳಂಬ ಮಾಡಿದೆ. ಪಕ್ಷದೊಳಗೆ ತೀವ್ರವಾದ ಅಪಸ್ವರಗಳು ಈಗಾಗಲೇ ಕೇಳಿಬರುತ್ತಿದೆ. ರಾಜ್ಯ ನಾಯಕತ್ವದ ವಿರುದ್ದವೇ ಹಲವೆಡೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಮೂರು ಕಡೆಗಳಲ್ಲಿಯೂ ಟಿಕೆಟ್ ಸಿಗದ ಕೆಲವು ಮುಖಂಡರುಗಳು ಕನ್ನಡನಾಡು ಪಾರ್ಟಿ, ಜನತಾ ಪಕ್ಷ ಮುಂತಾದ ಪಕ್ಷಗಳಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತಿಮವಾಗಿ ಪ್ರಮುಖ ರಾಜಕೀಯ ಪಕ್ಷದ ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಇಂಗಿತವನ್ನು ಈಗಾಗಲೇ ಕೆಲವರು ವ್ಯಕ್ತಪಡಿಸಿದ್ದಾರೆ.
(ಇನ್ಪೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications