ಕಣ್ಣಾಮುಚ್ಚಾಲೆಗೆ ಕೊನೆ : ಚಾಮರಾಜಪೇಟೆಯಿಂದ ಕೃಷ್ಣ ನಾಮಪತ್ರ
ಕಣ್ಣಾಮುಚ್ಚಾಲೆಗೆ ಕೊನೆ : ಚಾಮರಾಜಪೇಟೆಯಿಂದ ಕೃಷ್ಣ ನಾಮಪತ್ರ
ಮಾರ್ಕೆಟ್ ದೇವಿ ಕ್ಷೇತ್ರತ್ಯಾಗ, ಪ್ರಮೀಳಮ್ಮನ ಎದುರು ಕೃಷ್ಣ ಸ್ಪರ್ಧೆ
ಮಾ.31ರ ಬುಧವಾರ ಮಧ್ಯಾಹ್ನ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷ್ಣ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ತಾವು ಸ್ಪರ್ಧಿಸುವ ವಿಧಾನಸಭಾ ಕ್ಷೇತ್ರದ ಕುರಿತು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರು ಪಾಲಿಸಿಕೊಂಡು ಬಂದಿದ್ದ ರಹಸ್ಯ ಪಾಲನೆ ಬಯಲಾಯಿತು.
ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ , ಕೆಪಿಸಿಸಿ ಅಧ್ಯಕ್ಷ ಬಿ.ಜನಾರ್ಧನ ಪೂಜಾರಿ ಹಾಗೂ ಶಾಸಕ ಆರ್.ವಿ.ದೇವರಾಜ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿದ್ದರು.
ಕಳೆದ ಚುನಾವಣೆಗಳಲ್ಲಿ ತವರು ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರವನ್ನು ಕೃಷ್ಣ ಪ್ರತಿನಿಧಿಸಿದ್ದರು. ಆದರೆ ಈ ಬಾರಿ ಹೆಚ್ಚು ಸುರಕ್ಷಿತ ಕ್ಷೇತ್ರಕ್ಕೆ ಒತ್ತುಕೊಟ್ಟ ಕೃಷ್ಣ - ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸದಿರುವ ನಿರ್ಧಾರ ಕೈಗೊಂಡಿದ್ದಾರೆ. ಶ್ರೀನಿವಾಸಪುರ, ಹುಲಿಯೂರು ದುರ್ಗ, ಸಾತನೂರು, ಬಸವನಗುಡಿ ಕ್ಷೇತ್ರಗಳಿಂದ ಕೃಷ್ಣ ಅವರು ಸ್ಪರ್ಧಿಸುವ ಕುರಿತು ವದಂತಿಗಳು ಸೃಷ್ಟಿಯಾಗಿದ್ದವು.
ಮುಖ್ಯಮಂತ್ರಿ ಕೃಷ್ಣ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಹೇಳಿದ್ದರು. ಶ್ರೀನಿವಾಸಪುರ ಕ್ಷೇತ್ರದಿಂದ ಕೃಷ್ಣ ಸ್ಪರ್ಧಿಸುತ್ತಾರೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಪಾಳಯ ಸೇರಿರುವ ರಮೇಶ್ಕುಮಾರ್ ಹೇಳಿದ್ದರು. ಆದರೆ ಎಲ್ಲ ಹೇಳಿಕೆ ನಿರೀಕ್ಷೆಗಳನ್ನು ಸುಳ್ಳು ಮಾಡಿರುವ ಕೃಷ್ಣ ಚಾಮರಾಜಪೇಟೆಯಿಂದ ಕಣಕ್ಕಿಳಿದಿದ್ದಾರೆ.
ಚಾಮರಾಜಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಮೀಳಾ ನೇಸರ್ಗಿ ಸ್ಪರ್ಧಿಸುತ್ತಿದ್ದಾರೆ. ಪ್ರಸ್ತುತ ಕೆಎಸ್ಆರ್ಟಿಸಿ ಅಧ್ಯಕ್ಷರಾಗಿರುವ ಆರ್.ವಿ.ದೇವರಾಜ್ ಕಳೆದ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜಯಿಯಾಗಿದ್ದರು.
(ಇನ್ಫೋ ವಾರ್ತೆ)
ಕೃಷ್ಣ ಕಣ್ಣಾಮುಚ್ಚಾಲೆ ಕುರಿತು ನೀವೇನಂತೀರಿ ?
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications