ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜಪೇಟೇಲಿ ಪ್ರಮೀಳಾ ನೇಸರ್ಗಿ ಬಂಡಾಯದ ಬಾವುಟ

By Staff
|
Google Oneindia Kannada News

ಚಾಮರಾಜಪೇಟೇಲಿ ಪ್ರಮೀಳಾ ನೇಸರ್ಗಿ ಬಂಡಾಯದ ಬಾವುಟ
ಮುಖ್ಯಮಂತ್ರಿ ಚಂದ್ರು ನಾಮಪತ್ರ ವಾಪಸ್ಸಾತಿಗೆ ಒತ್ತಾಯ

ಬೆಂಗಳೂರು : ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸ್ಪರ್ಧಿಸಿರುವ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಮೀಳಾ ನೇಸರ್ಗಿ ಬಂಡಾಯದ ಬಾವುಟ ಹಾರಿಸಿದ್ದಾರೆ.

ಪ್ರಮೀಳಾ ನೇಸರ್ಗಿ ಅವರಿಗೆ ಈ ಮುನ್ನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡಲಾಗಿತ್ತು . ಆದರೆ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರ ಸ್ಪರ್ಧೆಯಿಂದ ಬದಲಾದ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನೇಸರ್ಗಿ ಅವರ ಜಾಗದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ತೀರ್ಮಾನಿಸಿದೆ. ಈ ತೀರ್ಮಾನದ ವಿರುದ್ಧ ಭುಗಿಲೆದ್ದಿರುವ ಪ್ರಮೀಳಾ ನೇಸರ್ಗಿ ಈಗ ಬಂಡಾಯದ ಬಾವುಟ ಹಾರಿಸಿದ್ದಾರೆ.

ಮಹಿಳೆಯರಿಗೆ ಟಿಕೆಟ್‌ ನೀಡಿರುವುದೇ ಕಡಿಮೆ. ಇಂಥ ಸಂದರ್ಭದಲ್ಲಿ ನನಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ . ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಧೈರ್ಯ ಹಾಗೂ ಸಾಮರ್ಥ್ಯ ನನಗಿದೆ ಎನ್ನುವುದನ್ನು ಪಕ್ಷ ಮರೆಯಬಾರದು ಎಂದು ಪ್ರಮೀಳಾ ನೇಸರ್ಗಿ ಗುರುವಾರ (ಏ.1) ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.

ತಮ್ಮ ಸ್ಪರ್ಧೆಗೆ ಅಭಿಮಾನಿಗಳು ಒತ್ತಾಯಿಸುತ್ತಿದ್ದು , ಮುಖ್ಯಮಂತ್ರಿ ಚಂದ್ರು ಅವರು ನಾಮಪತ್ರ ವಾಪಸ್ಸು ಪಡೆಯುವ ವಿಶ್ವಾಸ ತಮಗಿದೆ ಎಂದು ಪ್ರಮೀಳಾ ನೇಸರ್ಗಿ ವಿಶ್ವಾಸ ವ್ಯಕ್ತಪಡಿಸಿದರು. ಮತ್ತೊಬ್ಬ ನಟ ಅನಂತನಾಗ್‌ ಜಾತ್ಯತೀತ ಜನತಾದಳದಿಂದ ಚಾಮರಾಜಪೇಟೆ ಕಣದಲ್ಲಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಕುರುಕ್ಷೇತ್ರ-2004

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X