ಕೃಷ್ಣ ಅಧಿಕಾರಕ್ಕೆ ಮರಳಿದಲ್ಲಿ ಕೇಂದ್ರದ ವಿರುದ್ಧ ಸುಪ್ರಿಂಕೋರ್ಟ್ಗೆ
ಕೃಷ್ಣ ಅಧಿಕಾರಕ್ಕೆ ಮರಳಿದಲ್ಲಿ ಕೇಂದ್ರದ ವಿರುದ್ಧ ಸುಪ್ರಿಂಕೋರ್ಟ್ಗೆ
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಕಾನೂನು ಕ್ರಮ
ಬರ ಪರಿಹಾರ ನಿಧಿ, ಆಹಾರ ಕಾಳುಗಳ ವಿತರಣೆ, ಅಭಿವೃದ್ಧಿ ಕಾಮಗಾರಿಗಳಿಗೆ ನಿಧಿ ಮಂಜೂರು ಸೇರಿದಂತೆ ರಾಜ್ಯದ ಅನೇಕ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ . ಅಗತ್ಯ ಬಿದ್ದಲ್ಲಿ ನ್ಯಾಯಕ್ಕಾಗಿ ಸುಪ್ರಿಂಕೋರ್ಟ್ ಮೆಟ್ಟಿಲು ಹತ್ತಲು ಚುನಾವಣೆ ನಂತರ ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ಹೇಳಿದರು. ವಿಜಯದುಂದುಭಿ ಯಾತ್ರೆಯ ಎರಡನೇ ಹಂತದ ಅಂಗವಾಗಿ ಬಿಜಾಪುರಕ್ಕೆ ಆಗಮಿಸಿರುವ ಕೃಷ್ಣ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಅನೇಕ ಬಾರಿ ಅಲವತ್ತುಕೊಂಡರೂ ಆಹಾರಧಾನ್ಯಗಳನ್ನು ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸಿತು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗೆ ಅನುಮತಿ ನೀಡಲು ಕೂಡ ಮೀನಾಮೇಷ ಎಣಿಸಿತು ಎಂದು ಕೃಷ್ಣ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಮಂಗಳೂರಿಗೆ ವಿಚ್ಪಿಯ ಪ್ರವೀಣ್ ತೊಗಾಡಿಯಾ ಪ್ರವೇಶವನ್ನು ನಿರಾಕರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರಿಂಕೋರ್ಟ್ ಆದೇಶವನ್ನು ಚರಿತ್ರಾರ್ಹ ಎಂದು ಬಣ್ಣಿಸಿದ ಕೃಷ್ಣ - ಈ ತೀರ್ಪಿನಿಂದಾಗಿ ಕೋಮುಶಕ್ತಿಗಳ ಚಟುವಟಿಕೆಗಳನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ಸಂಕಲ್ಪಕ್ಕೆ ಇನ್ನಷ್ಟು ಶಕ್ತಿ ಬಂದಿದೆ ಎಂದು ಬಣ್ಣಿಸಿದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications