ಮಲ್ಯ ಪ್ರಣಾಳಿಕೆ : ರೈತರ ಸಾಲ ಮನ್ನಾ , ವಿಮೆ, ಹಳ್ಳಿಗೊಂದು ಶಾಲೆ
ಮಲ್ಯ ಪ್ರಣಾಳಿಕೆ : ರೈತರ ಸಾಲ ಮನ್ನಾ , ವಿಮೆ, ಹಳ್ಳಿಗೊಂದು ಶಾಲೆ
‘ನೇಗಿಲು ಹೊತ್ತ ರೈತ’ ಗುರ್ತಿನ ಜನತಾ ಪಕ್ಷದ ಪ್ರಣಾಳಿಕೆ ಬಿಡುಗಡೆ
ನಮ್ಮ ದೃಷ್ಟಿಯು ಮುಂದಿನ ಐದು ವರ್ಷಗಳಲ್ಲಿ ದಕ್ಷಿಣ ಭಾರತದಲ್ಲೇ ಕರ್ನಾಟಕವನ್ನು ಅತ್ಯುನ್ನತ ರಾಜ್ಯವನ್ನಾಗಿ ಮಾಡುವುದಾಗಿದೆ. ಎಂದು ಪತ್ರಕರ್ತರನ್ನು ಉದ್ದೇಶಿಸಿ ಹೇಳಿದ ಅವರು ಕಾಂಗೈ ಮತ್ತು ಬಿಜೆಪಿಯನ್ನು ಟೀಕಿಸಲು ಮರೆಯಲಿಲ್ಲ.
ಅಧಿಕಾರಕ್ಕೆ ಬಂದಲ್ಲಿ ಸಾಲ ಮನ್ನಾ, ಮಧ್ಯಮವರ್ತಿಗಳ ನಿರ್ನಾಮ, ಜೀವ ವಿಮೆ, ವಿದ್ಯುತ್ ಪೂರೈಕೆಯಂತಹ ಮಹತ್ತರ ಕಾರ್ಯ ನೆರವೇರಿಸಲಾಗುವುದು. ಹೈದರಾಬಾದ್- ಕರ್ನಾಟಕದ ಹಿಂದುಳಿದ ಪ್ರದೇಶಗಳಿಗೆ ವಿಶೇಷ ಅನುದಾನ ಯೋಜನೆ. ಶಾಲೆ ಮಕ್ಕಳನ್ನು ಕಳುಹಿಸುವ ಪಾಲಕರಿಗೂ ಆಹಾರ ಧಾನ್ಯದಲ್ಲಿ ರಿಯಾಯಿತಿ. ಹಳ್ಳಿಗೊಂದು ಶಾಲೆ ನಿರ್ಮಿಸಲಾಗುವುದು ಎಂದು ಹೇಳಿದರು.
ಈ ಪ್ರಣಾಳಿಕೆಯು ಕಳೆದ ಐದು ವರ್ಷಗಳ ಕಾಂಗೈ ಅವಧಿಯನ್ನು ‘ಅಹಿತಕರ ಆಡಳಿತ ’ ಎಂದು ಬಿಂಬಿಸಿದೆ. ಈ ಅವಧಿಯಲ್ಲಿ ಸರಕಾರದ ಜವಾಬ್ದಾರಿ ರಹಿತ ಕಾರ್ಯಗಳು, ಹೆಚ್ಚಿದ ರೈತರ ಆತ್ಮಹತ್ಯೆ, ಹಳ್ಳಿಗಳಿಗೆ ಪೂರೈಸಲಾಗದ ಕುಡಿಯುವ ನೀರು, ಕಳಪೆ ಮೂಲಭೂತ ಸೌಕರ್ಯಗಳ ನಿರ್ಮಾಣಗಳ ಕುರಿತು ದಾಳಿ ಮಾಡಿದೆ.
ಕಾಂಗ್ರೆಸ್ಗೆ ಅವಕಾಶ ನೀಡಿದ್ದೀರಿ ಅವರು ಆಡಳಿತ ನಡೆಸುವಲ್ಲಿ ಸೋತರು. ಬಿಜೆಪಿಗೆ ಅಧಿಕಾರಕ್ಕೆ ಬರುವ ಅರ್ಹತೆಯಿಲ್ಲ. ವಾಜಪೇಯಿ ವ್ಯಕ್ತಿತ್ವವನ್ನು ಬಿಂಬಿಸಿ ಅವರು ಕರ್ನಾಟಕದ ಜನತೆಯನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ನುಡಿದರು.
ಚುನಾವಣೆಯಲ್ಲಿ ಕಾದು ನೋಡಿ. ನಾವು ಅಚ್ಚರಿಯ ಫಲಿತಾಂಶ ನೀಡಲಿದ್ದೇವೆ. ಅಧಿಕಾರ ನಿರ್ಣಯಿಸುವ ನಿಟ್ಟಿನಲ್ಲಿ ನಮ್ಮ ಪಕ್ಷವು ಪ್ರಧಾನ ಪಾತ್ರವಹಿಸಲಿದೆ. ಮೊದಲ ಸುತ್ತಿನ ಚುನಾವಣೆಯಲ್ಲಿ 105 ಆಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಎರಡನೇ ಸುತ್ತಿನ ಚುನಾವಣೆಯಲ್ಲಿ 50 ರಿಂದ 60 ಆಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications