ಜನ ಸಾಗರದ ನಡುವೆ ನಂಜನಗೂಡು ಶ್ರೀಕಂಠೇಶ್ವರನ ರಥೋತ್ಸವ
ಜನ ಸಾಗರದ ನಡುವೆ ನಂಜನಗೂಡು ಶ್ರೀಕಂಠೇಶ್ವರನ ರಥೋತ್ಸವ
ಬಿಗಿ ಭದ್ರತೆ, ಜನರ ಸಂಭ್ರಮ, ರಾತ್ರಿಯಿಡೀ ಪೂಜೆ ಪುನಸ್ಕಾರ
ನಾಲ್ಕು ವರ್ಷಗಳ ಹಿಂದೆ ನಡೆದ ರಥೋತ್ಸವದ ಸಂದರ್ಭದಲ್ಲಿ ರಥವನ್ನು ಎಳೆಯುವ ಸಂದರ್ಭದಲ್ಲಿ ಹಲವರಿಗೆ ಪೆಟ್ಟಾಗಿತ್ತು. ಆದರೆ ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿತ್ತು .
250 ಟನ್ ಭಾರದ ಬೃಹತ್ ಗಾತ್ರದ ಚಕ್ರಗಳ, 100 ಅಡಿ ಎತ್ತರದ ರಥದ ಸುತ್ತಲೂ ರಕ್ಷಣಾ ಕವಚವನ್ನು ಅಳವಡಿಸಲಾಗಿತ್ತು . ಮತ್ತು 50 ಪೊಲೀಸ್ ಸಿಬ್ಬಂದಿಗಳು ರಥದ ಸುತ್ತಲೂ ಭದ್ರತಾ ವ್ಯವಸ್ಥೆ ಮಾಡಿದ್ದರು.
ಬೆಳಿಗ್ಗೆ 5.50ರ ನಸುಕಿನಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಕುಮಾರ್ ದೀಕ್ಷಿತ್ರವರು ಆದಿಪೂಜ್ಯ ವಿಘ್ನೕಶ್ವರನನ್ನು ಪೂಜಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀಕಂಠೇಶ್ವರನನ್ನು ಹೊತ್ತಿರುವ ಗೌತಮ ರಥದ ಪೂಜೆಯಾಂದಿಗೆ ರಥವನ್ನು ಎಳೆಯಲಾಯ್ತು. ಐದು ರಥಗಳಲ್ಲಿ ಪಾರ್ವತಿ, ಗಣಪತಿ, ಸುಬ್ರಹ್ಮಣ್ಯ ಮತ್ತು ಚಂಡಿಕೇಶ್ವರ ದೇವರುಗಳನ್ನು ಸಿಂಗರಿಸಿ ಕೂರಿಸಲಾಗಿತ್ತು.
ಸಚಿವ ಎಂ. ಮಹಾದೇವು ರಥೋತ್ಸವ ಕಾರ್ಯಕ್ರಮದಲ್ಲಿ ಹಾಜರಿದ್ದರು. ರಥವು ಮುಂದಕ್ಕೆ ಚಲಿಸುತ್ತಿದ್ದಂತೆಯೇ ಅರ್ಚಕರುಗಳ ವೇದ ಮಂತ್ರ ಘೋಷ, ಭಕ್ತಾದಿಗಳ ಜೈಕಾರ ಮುಗಿಲು ಮುಟ್ಟಿತ್ತು. ರಥದ ಗೋಪುರಕ್ಕೆ ಬಾಳೆಹಣ್ಣು ಎಸೆಯುವುದು ಕೂಡ ರೂಢಿಗತ ಸಂಪ್ರದಾಯವಾಗಿದ್ದು ಎಲ್ಲರೂ ರಥಕ್ಕೆ ಏಲಕ್ಕಿ ಬಾಳೆಹಣ್ಣಿನ ಮಳೆಗರೆದರು.
ಉತ್ಸವಕ್ಕೆ ಪಾಲ್ಗೊಳ್ಳುವ ಮುನ್ನ ಪವಿತ್ರವಾದ ಕಪಿಲಾ ನದಿಯಲ್ಲಿ ಮಿಂದು ಶುಚಿಯಾಗಿ ಬರಬೇಕೆಂಬುದು ಭಕ್ತಾದಿಗಳ ನಂಬಿಕೆ. ರಥೋತ್ಸವವು ಮಧ್ಯರಾತ್ರಿಯವರೆಗೂ ನಡೆದಿದ್ದು , ಸೇರಿದ ಜನಸಾಗರ ರಾತ್ರಿಯ ಸಮಯದ ತನಕ ಒಂದು ಲಕ್ಷ ತಲುಪಿರಬಹುದೆಂದು ಅಂದಾಜಿಸಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications