ಬೆಂಗಳೂರಿನ ಕೆಲ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ
ಬೆಂಗಳೂರಿನ ಕೆಲ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ
ಏಪ್ರಿಲ್ 10ರಿಂದ ಬದಲಾವಣೆ ಅನುಷ್ಠಾನಕ್ಕೆ
ಸುಗಮ ಸಾರಿಗೆ ಉದ್ದೇಶದಿಂದ ಕೆಲ ರಸ್ತೆಗಳ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಮರಿಸ್ವಾಮಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಈ ಬದಲಾವಣೆಗಳು ಏಪ್ರಿಲ್ 10 ರಿಂದ ಕಾರ್ಯಗತವಾಗಲಿವೆ. ಬದಲಾವಣೆಗಳು ಕೆಳಗಿನಂತಿವೆ.
ಕೆಂಪೇಗೌಡ ರಸ್ತೆ : ಪೊಲೀಸ್ ಕಾರ್ನರ್ ವೃತ್ತದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಈಗಿರುವ ಸಂಚಾರ ವ್ಯವಸ್ಥೆಯನ್ನು ಯಥಾವತ್ತಾಗಿಟ್ಟುಕೊಂಡು, ಮೈಸೂರು ಬ್ಯಾಂಕ್ ವೃತ್ತದಿಂದ ಪೊಲೀಸ್ ಕಾರ್ನರ್ ವೃತ್ತದ ಕಡೆಗಿನ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಶೇಷಾದ್ರಿ ರಸ್ತೆ : ಈವರೆಗೆ ಆನಂದರಾವ್ ವೃತ್ತದಿಂದ ಮಹಾರಾಣಿ ವೃತ್ತದವರೆಗೆ ಇದ್ದ ಏಕಮುಖ ಸಂಚಾರ ವ್ಯವಸ್ಥೆಯನ್ನು ಕೆ.ಆರ್. ವೃತ್ತದವರೆಗೆ ವಿಸ್ತರಿಸಲಾಗಿದೆ. ಈಗ ಕೆ.ಆರ್. ವೃತ್ತದಿಂದ ಮಹಾರಾಣಿ ಕಾಲೇಜ್ ವೃತ್ತದ ಕಡೆಗೆ ಸಂಚರಿಸುವ ಎಲ್ಲ ವಿಧದ ವಾಹನ ಸಂಚಾರ ನಿಷೇಧಿಸಲಾಗಿದೆ.
ಪ್ಯಾಲೇಸ್ ರಸ್ತೆ : ಮಹಾರಾಣಿ ಕಾಲೇಜ್ ವೃತ್ತದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಸಂಚರಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ, ಮೈಸೂರು ಬ್ಯಾಂಕ್ ವೃತ್ತದಿಂದ ಮಹಾರಾಣಿ ಕಾಲೇಜ್ ವೃತ್ತದವರೆಗೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಹಳೆ ಪೋಸ್ಟ್ ಆಫೀಸ್ ರಸ್ತೆ : ಈ ರಸ್ತೆಯಲ್ಲಿ ಕೆ. ಆರ್. ವೃತ್ತದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಇರುವ ಏಕಮುಖ ಸಂಚಾರ ವ್ಯವಸ್ಥೆಯನ್ನು ರದ್ದುಪಡಿಸಿ ಬಿಎಂಟಿಸಿ ಮತ್ತು ಕೆ.ಎಸ್.ಆರ್.ಟಿ.ಸಿ. ವಾಹನಗಳ ಸಹಿತ ಇತರೆ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಲಘು ವಾಹನಗಳು, ದ್ವಿಚಕ್ರ ವಾಹನಗಳಿಗೆ ಎರಡೂ ಬದಿಯ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಕೆ.ಆರ್. ವೃತ್ತದಿಂದ ಪೊಲೀಸ್ ಕಾರ್ನರ್ ವೃತ್ತದ ಕಡೆ ಬರುವ ವಾಹನಗಳು (ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ) ಪೊಲೀಸ್ ಕಾರ್ನರ್ನಲ್ಲಿ ಮುಕ್ತ ಬಲ ತಿರುವು ಪಡೆದು ಮೈಸೂರು ಬ್ಯಾಂಕ್ ವೃತ್ತದ ಕಡೆಗೆ ಚಲಿಸಬಹುದಾಗಿದೆ.
ಕಾವೇರಿ ಭವನ ಬಳಿ ಇರುವ ಬಿಎಂಟಿಸಿ ಬಸ್ ನಿಲ್ದಾಣವನ್ನು ಶೇಷಾದ್ರಿ ರಸ್ತೆಯ ಎಸ್.ಜೆ. ಪಾಲಿಟೆಕ್ನಿಕ್ ಮುಂಭಾಗಕ್ಕೆ ಹಾಗೂ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ರವರ ನ್ಯಾಯಾಲಯದ ಮುಂಭಾಗಕ್ಕೆ ಸ್ಥಳಾಂತರಿಸಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಬೆಂಗಳೂರು ಡೈರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications