Get Updates
Get notified of breaking news, exclusive insights, and must-see stories!

ಅಭಿಮಾನಿಗಳ ಆಸೆಯಂತೆ ಹಾಸನದಲ್ಲಿ ದೇವೇಗೌಡರ ನಾಮಪತ್ರ

ಅಭಿಮಾನಿಗಳ ಆಸೆಯಂತೆ ಹಾಸನದಲ್ಲಿ ದೇವೇಗೌಡರ ನಾಮಪತ್ರ
ಬಹಿರಂಗ ಚರ್ಚೆಗೆ ಸೋನಿಯಾ-ವಾಜಪೇಯಿಗೆ ಆಹ್ವಾನ

ಹಾಸನ : ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾದಳದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು. ಕಳೆದ ವಾರ ಕನಕಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿಯೂ ದೇವೇಗೌಡ ನಾಮಪತ್ರ ಸಲ್ಲಿಸಿದ್ದರು.

ಹಾಸನ ಜಿಲ್ಲೆಯ ಜಾತ್ಯತೀತ ಜನತಾದಳದ ನಾಯಕರೊಂದಿಗೆ ಏ.7ರ ಬುಧವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ದೇವೇಗೌಡ, ಲೋಕಸಭಾ ಸ್ಪರ್ಧೆಗೆ ತಮ್ಮ ನಾಮಪತ್ರ ಸಲ್ಲಿಸಿದರು. ರಾಜ್ಯಸಭೆಯ ಮಾಜಿ ಸದಸ್ಯ ಎಚ್‌.ಕೆ.ಜವರೇಗೌಡ, ಕುಮಾರಸ್ವಾಮಿ ಪುತ್ರ ಎಚ್‌.ಡಿ.ರೇವಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು. ಯಥಾಪ್ರಕಾರ ಅಭಿಮಾನಿಗಳ ಜೈಕಾರ ಹಾಗೂ ಪಟಾಕಿ ಕಲರವೂ ಇತ್ತು .

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ- ಪ್ರಧಾನಿ ವಾಜಪೇಯಿ ಹಾಗೂ ಪ್ರತಿಪಕ್ಷದ ನಾಯಕಿ ಸೋನಿಯಾಗಾಂಧಿ ಅವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದರು. ಧೈರ್ಯವಿದ್ದರೆ ಸೋನಿಯಾ ಹಾಗೂ ವಾಜಪೇಯಿ ಬಹಿರಂಗ ಚರ್ಚೆಗೆ ಬರಲಿ. ಈ ಚರ್ಚೆಯಲ್ಲಿ ಸೋತರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ದೇವೇಗೌಡ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಕುರುಕ್ಷೇತ್ರ-2004

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+