ಲಕ್ನೋದಲ್ಲಿ ‘ಲಾಲ್ಜೀ ಬರ್ತಡೇ ಸೀರೆ’ಗೆ ನೂಕುನುಗ್ಗಲು, 21 ಸಾವು
ಲಕ್ನೋದಲ್ಲಿ ‘ಲಾಲ್ಜೀ ಬರ್ತಡೇ ಸೀರೆ’ಗೆ ನೂಕುನುಗ್ಗಲು, 21 ಸಾವು
ಪ್ರಧಾನಿ ವಾಜಪೇಯಿ ಸ್ಥಳಕ್ಕೆ ಭೇಟಿ, ಸಂತ್ರಸ್ತರಿಗೆ ಸಾಂತ್ವನ
ನಗರದ ಆಜಾದ್ಪಾರ್ಕ್ನಲ್ಲಿ ಸೀರೆ ಪಡೆಯುವುದಕ್ಕಾಗಿ ಸುಮಾರು 10,000 ಮಹಿಳೆಯರು ನೆರೆದಿದ್ದರು. ಅವರೆಡೆಗೆ ಸೀರೆಯನ್ನು ಎಸೆಯಲಾಗುತ್ತಿತ್ತು. ಆದರೆ ಬಳಿಕ ಸೀರೆಯನ್ನು ಮುಖ್ಯದ್ವಾರದ ಕೌಂಟರ್ ಬಳಿ ನೀಡಲಾಗುವುದು ಎಂದು ಪ್ರಕಟಿಸಿದಾಗ ನೆರೆದಿದ್ದ ನಾರಿಯರು ಅತ್ತ ಓಡಿದಾಗ ಉಂಟಾದ ನೂಕುನುಗ್ಗಲಿನ ಕಾಲ್ತುಳಿತದಲ್ಲಿ ಸಾವುನೋಲು ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳೊಬ್ಬರು ತಿಳಿಸಿದ್ದಾರೆ.
ತಕ್ಷಣ ತನ್ನ ಜಾರ್ಖಂಡ್ ಕಾರ್ಯಕ್ರಮ ಮೊಟಕುಗೊಳಿಸಿ ಪ್ರಧಾನಿ ಲಕ್ನೋಗೆ ಆಗಮಿಸಿದ್ದಾರೆ. ಈ ಘಟನೆಯನ್ನು ಯಾವುದೇ ಕಾರಣಕ್ಕೂ ಚುನಾವಣೆಗೆ ಸಂಬಂಧಿಸಬಾರದು ಎಂದು ಅವರು ಹೇಳಿದರು. ಬಳಿಕ ಮೃತರ ಮನೆಗೆ ತೆರಳಿ ಶೋಕ ವ್ಯಕ್ತಪಡಿಸಿದ್ದಾರೆ. ಆದರೆ ಈ ಘಟನೆಯನ್ನು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಘಟನೆ ನಡೆದ ಸಂದರ್ಭದಲ್ಲಿ ಲಾಲ್ಜಿ ಟೆಂಡನ್ ದುರ್ಘಟನೆ ಸಂಭವಿಸಿದ ಸ್ಥಳದಿಂದ ನಿರ್ಗಮಿಸಿದ್ದರು. ಇದು ಖಾಸಗಿ ಕಾರ್ಯಕ್ರಮವಾಗಿತ್ತು. ಸೀರೆ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು ಎಂದು ಸಂಘಟಕರು ಹೇಳಿದ್ದಾರೆ.
ಘಟನೆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಲಕ್ನೋ ಕಮಿಷನರ್ ಡಿ.ಸಿ. ಲಖಾ ಅವರಿಗೆ ಸೂಚಿಸಿದ್ದಾರೆ. ಚುನಾವಣಾ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಆದ ಕಾರಣ ಇದು ಕಾನೂನು ಬಾಹಿರ ಕಾರ್ಯಕ್ರಮ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications