ಬೆಂಗಳೂರಲ್ಲಿ ಕಾಲ್ಸೆಂಟರ್, ಬೆರಳು ತುದಿಯಲ್ಲಿ ರೈಲು ಸಮಾಚಾರ
ಬೆಂಗಳೂರಲ್ಲಿ ಕಾಲ್ಸೆಂಟರ್, ಬೆರಳು ತುದಿಯಲ್ಲಿ ರೈಲು ಸಮಾಚಾರ
ಆಗಸ್ಟ್ ವೇಳೆಗೆ ಕಾಲ್ ಸೆಂಟರ್ ಕಾರ್ಯಾರಂಭ
ಮುಂಬರುವ ಆಗಸ್ಟ್ ವೇಳೆಗೆ ಈ ಕಾಲ್ಸೆಂಟರ್ು ಕಾರ್ಯರೂಪಕ್ಕೆ ಬರಲಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮಹೇಶ್ ಕುಮಾರ್ ತಿಳಿಸಿದರು. ಏಪ್ರಿಲ್ 13 ರಂದು ನಡೆದ 49ನೇ ರೈಲ್ವೆ ಸಪ್ತಾಹದಲ್ಲಿ ಭಾಗವಹಿಸಿದ್ದ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಇದೊಂದು ಪರಿಪೂರ್ಣ ಮಾಹಿತಿಯನ್ನೊದಗಿಸುವ ಕಾಲ್ ಸೆಂಟರ್ ಆಗಲಿದೆ. ರೈಲ್ವೆ ಮುಂಗಡ ಟಿಕೆಟ್ ಕಾಯ್ದಿರಿಸುವುದು, ಟಿಕೆಟ್ ದೊರಕುವುದರ ಬಗ್ಗೆ ನಿಖರ ಮಾಹಿತಿ, ಯಾವ ಪಟ್ಟಿ(ಹಳಿ)ಯಲ್ಲಿ ಮತ್ತು ಯಾವ ಫ್ಲಾಟ್ಫಾರಂನಲ್ಲಿ ಸಂಬಂಧಪಟ್ಟ ರೈಲು ನಿಲ್ಲುವುದು, ಯಾವ ಮಾರ್ಗವಾಗಿ ಹೋಗುವುದು ಮುಂತಾದ ಸವಿವರ ಮಾಹಿತಿಯನ್ನು ಪ್ರಯಾಣಿಕರಿಗೆ ಈ ಕಾಲ್ ಸೆಂಟರ್ ಒದಗಿಸಲಿದೆ. ಅಲ್ಲದೆ ಎಸ್ಸೆಮ್ಮೆಸ್ ಮೂಲಕವೂ ಮಾಹಿತಿ ನೀಡುವ, ಪಡೆಯುವ ಸೌಲಭ್ಯ ಕಲ್ಪಿಸಲಿದ್ದೇವೆ ಎಂದು ಮಹೇಶ್ ಕುಮಾರ್ ತಿಳಿಸಿದರು.
ಯಶವಂತಪುರದ ರೈಲ್ವೆ ತಂಗುದಾಣವನ್ನು ನವೀಕರಿಸುವ ಯೋಜನೆಯೂ ಇದೆ. ಅಲ್ಲದೇ ಮೆಜೆಸ್ಟಿಕ್ ಮತ್ತು ಯಶವಂತಪುರ ರೈಲ್ವೆ ತಂಗುದಾಣಗಳ ನಡುವೆ ಅಗತ್ಯ ಬಸ್ ವ್ಯವಸ್ಥೆಗಳನ್ನು ಮಾಡಲಿದ್ದೇವೆ ಎಂದು ಮಹೇಶ್ ಕುಮಾರ್ ತಿಳಿಸಿದರು. ರೈಲ್ವೆ ಸಿಬ್ಬಂದಿಗಳಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಿದ್ದು , ಈ ಬಾರಿ 550 ಸಿಬ್ಬಂದಿಗಳು ತಮ್ಮ ಅವಿರತ ಸೇವೆಗೆ ಪ್ರಶಸ್ತಿ ಪಡೆದರು. ಪ್ರಶಸ್ತಿ ಪ್ರದಾನ ಕಾರ್ಯವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ನಿರ್ದೇಶಕರಾದ ಡಾ. ಪ್ರಕಾಶ್ ಜಿ. ಆಪ್ಟೆ ನಡೆಸಿಕೊಟ್ಟರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications