ಕಾಂಗ್ರೆಸ್ ಹೊಸಅಸ್ತ್ರ : ನಿರುದ್ಯೋಗ ಭತ್ಯೆ, 3ರು. ಅಕ್ಕಿ, ಉಚಿತ ಸೀರೆ
ಕಾಂಗ್ರೆಸ್ ಹೊಸಅಸ್ತ್ರ : ನಿರುದ್ಯೋಗ ಭತ್ಯೆ, 3ರು. ಅಕ್ಕಿ, ಉಚಿತ ಸೀರೆ
ಆತಂಕಿತ ರಾಜ್ಯ ಕಾಂಗ್ರೆಸ್ನಿಂದ ನವೀಕೃತ ಪ್ರಣಾಳಿಕೆ
ನಿರುದ್ಯೋಗಿ ಯುವ ಜನತೆಗೆ ನಿರುದ್ಯೋಗ ಭತ್ಯೆ, ಬಡತನದ ರೇಖೆಯಿಂತ ಕೆಳಗಿರುವ ಕುಟುಂಬಗಳಿಗೆ ವರ್ಷಕ್ಕೊಂದು ಸೀರೆ, ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಶೇ.4ರ ಬಡ್ಡಿಯಲ್ಲಿ ಸಾಲ ಹಾಗೂ 3 ರುಪಾಯಿಗೆ ಕಿಲೋ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಪಕ್ಷದ ನವೀಕೃತ ಪ್ರಣಾಳಿಕೆಯನ್ನು ಏ.15ರ ಗುರುವಾರ ಬಿಡುಗಡೆ ಮಾಡಿದರು.
ಪ್ರಣಾಳಿಕೆಯ ಮುಖ್ಯಾಂಶಗಳು :
- 18 ರಿಂದ 25ರ ವಯೋಮಿತಿಯ ನಿರುದ್ಯೋಗಿಗಳಿಗೆ ತಿಂಗಳಿಗೆ 500 ರು.ಗಳ ನಿರುದ್ಯೋಗ ಭತ್ಯೆ. 5 ಲಕ್ಷ ಮಂದಿಗೆ ಅನ್ವಯವಾಗುವ ಈ ಯೋಜನೆಯನ್ನು ಭರವಸೆಯ ಕಿರಣ ಎಂದು ಹೆಸರಿಸಲಾಗಿದೆ.
- 3 ರುಪಾಯಿಗೆ ಕೇಜಿ ಅಕ್ಕಿ.
- ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಶೇ.4ರ ಬಡ್ಡಿಯಲ್ಲಿ ಸಾಲ.
- ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವರ್ಷಕ್ಕೊಂದು ಉಚಿತ ಸೀರೆ.
- ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳ ಯೋಜನೆ ಹುಡುಗರಿಗೂ (10ನೇ ತರಗತಿಯವರೆಗೆ) ವಿಸ್ತರಣೆ.
- ಸ್ವಾಯತ್ತ ಮಂಡಳಿಯಿಂದ ಮದರಸಾಗಳಿಗೆ ಅನುದಾನ.
- ಕ್ರಿಶ್ಚಿಯನ್ನರ ಹಿತಾಸಕ್ತಿ ರಕ್ಷಣೆಗಾಗಿ ಕಾನೂನುಬದ್ಧ ಸಮಿತಿ ರಚನೆ.
- ಜಾಗತಿಕ ಮಟ್ಟದ ವಿದ್ಯುತ್, ವೈದ್ಯಕೀಯ ಹಾಗೂ ಸಾರಿಗೆ ಸಂಪರ್ಕ.
- ಎಸ್ಸಿ, ಎಸ್ಟಿ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಯುವಜನತೆಗೆ ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಉದ್ಯೋಗ.
(ಪಿಟಿಐ)
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ?
ಮುಖಪುಟ / ಕುರುಕ್ಷೇತ್ರ-2004
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications