ಚಾಮರಾಜಪೇಟೆ: ಬಂಗಾರಪ್ಪ-ಮುಖ್ಯಮಂತ್ರಿ ಚಂದ್ರು ಕಾರಿಗೆ ಕಲ್ಲು
ಚಾಮರಾಜಪೇಟೆ: ಬಂಗಾರಪ್ಪ-ಮುಖ್ಯಮಂತ್ರಿ ಚಂದ್ರು ಕಾರಿಗೆ ಕಲ್ಲು
ಶುಕ್ರವಾರ ಬಿಜೆಪಿಯಿಂದ ಚಾಮರಾಜಪೇಟೆ ಬಂದ್
ಏಪ್ರಿಲ್ 15ರ ಗುರುವಾರ ಸಂಜೆ ಬಿಜೆಪಿ ಪರ ಪ್ರಚಾರ ಭಾಷಣ ಮುಗಿಸಿ ಹೊರಡುತ್ತಿದ್ದ , ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿಕೊಂಡ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಮುಖ್ಯಮಂತ್ರಿ ಚಂದ್ರು ಅವರ ಕಾರಿಗೆ ಕಿಡಿಗೇಡಿಗಳ ಗುಂಪೊಂದು ಕಲ್ಲು ತೂರಿದೆ .
ಕಾರಿಗೆ ಕಲ್ಲು ತೂರಿದ ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಂದು ಬಿಜೆಪಿ ದೂರಿದ್ದರೆ, ಇದು ಬಿಜೆಪಿಯ ನಿಯೋಜಿತ ತಂತ್ರ ಎಂದು ಕಾಂಗ್ರೆಸ್ ಆಪಾದಿಸಿದೆ. ಈ ದಾಳಿಯನ್ನು ಪ್ರತಿಭಟಿಸಿ ಏ.16ರ ಶುಕ್ರವಾರ ಚಾಮರಾಜಪೇಟೆ ಬಂದ್ಗೆ ಬಿಜೆಪಿ ಕರೆಯಿತ್ತಿದೆ. ಬಂದ್ ಸಮಯದಲ್ಲಿ ಕಪ್ಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಗುರುವಾರ ಸಂಜೆ ಸುಮಾರು 7.30ರ ಹೊತ್ತಿಗೆ ಪ್ರಚಾರ ಭಾಷಣ ಮುಗಿಸಿ ಹೊರಟ ಬಿಜೆಪಿ ನಾಯಕರುಗಳ ಕಾರನ್ನು ಅಡ್ಡಗಟ್ಟಿದ 50 ಜನರ ಗುಂಪೊಂದು ಅವರೆಡೆಗೆ ಕಲ್ಲು ತೂರಿತು. ಈ ಗುಂಪು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮತ್ತು ಕ್ಷೇತ್ರದ ಮಾಜಿ ಶಾಸಕ ಆರ್.ವಿ. ದೇವರಾಜ್ಗೆ ಜಯಕಾರ ಹಾಕುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಲ್ಲು ತೂರಾಟ ವಿರೋಧಿಸಿ ಮುಖ್ಯಮಂತ್ರಿ ಚಂದ್ರು ಮತ್ತು ಬಿಜೆಪಿ ಮುಖಂಡೆ ಪ್ರಮಿಳಾ ನೇಸರ್ಗಿ ಸ್ಥಳೀಯ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು, ಕೃಷ್ಣ ಅವರು ಯಾವುದಾದರು ತಂತ್ರ ಬಳಸಿ ಗೆಲ್ಲಲೇಬೇಕೆಂದು ನಿರ್ಧರಿಸಿದಂತಿದೆ. ಇದರಲ್ಲಿ ಪೊಲೀಸರು ಶಾಮೀಲಾದಂತಿದೆ. ಆದರೆ ಅದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ಈ ಘಟನೆ ಮತ್ತು ಪಕ್ಷಕ್ಕೂ ಏನೇನು ಸಂಬಂಧವಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಇದು ಭಾಜಪಾದ ಚುನಾವಣಾ ತಂತ್ರವಷ್ಟೆ. ಜನರ ದೃಷ್ಟಿಯಲ್ಲಿ ಮುಖ್ಯಮಂತ್ರಿ ಕೃಷ್ಣ ಅವರ ವ್ಯಕ್ತಿತ್ವವನ್ನು ಹಾಳುಗೆಡಹುವ ಷಡ್ಯಂತ್ರ ಎಂದು ಪಕ್ಷದ ವಕ್ತಾರ ಆರ್.ವಿ.ಸುದರ್ಶನ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications