ವಚನಭ್ರಷ್ಟ ಎನ್ಡಿಎ ಕಿತ್ತೊಗೆಯಿರಿ, ಕಾಂಗ್ರೆಸ್ ಗೆಲ್ಲಿಸಿ -ಸೋನಿಯಾ
ವಚನಭ್ರಷ್ಟ ಎನ್ಡಿಎ ಕಿತ್ತೊಗೆಯಿರಿ, ಕಾಂಗ್ರೆಸ್ ಗೆಲ್ಲಿಸಿ -ಸೋನಿಯಾ
ಕಾಂಗ್ರೆಸ್ ಪರ ರಾಜ್ಯದಲ್ಲಿ ಸೋನಿಯಾಗಾಂಧಿ ಭರಾಟೆಯ ಪ್ರಚಾರ
ಎನ್ಡಿಎ ಸರ್ಕಾರ ಕಳೆದ ಐದು ವರ್ಷಗಳ ಆಡಳಿತದಲ್ಲಿ ಜನತೆಯ ಹಿತಾಸಕ್ತಿ ರಕ್ಷಿಸುವಲ್ಲಿ ವಿಫಲವಾಗಿದೆ. ಎಲ್ಲ ರಂಗಗಳಲ್ಲಿಯೂ ಸರ್ಕಾರದ ಸಾಧನೆ ಶೂನ್ಯವಾಗಿದ್ದು , ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿಯೂ ಸರ್ಕಾರ ಯಶಸ್ಸು ಗಳಿಸಿಲ್ಲ . ಇಂಥ ವಚನಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಸೋನಿಯಾ ಗಾಂಧಿ ಹೇಳಿದರು. ಅವರು ಕೋಲಾರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ನಡೆದ ಭಾರೀ ರ್ಯಾಲಿಯನ್ನುದ್ದೇಶಿಸಿ ಏ.16ರ ಶುಕ್ರವಾರ ಮಾತನಾಡುತ್ತಿದ್ದರು.
ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಅನುವಾಗುವಂತೆ ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸುವಂತೆ ಸೋನಿಯಾ ಜನತೆಯನ್ನು ಕೋರಿದರು. ದೇಶದಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಎನ್ಡಿಎ ಹೇಳಿತ್ತು . ಆದರಿಂದು ಒಂದು ಕೋಟಿ ಮಂದಿ ಬೀದಿಗೆ ಬಂದು ನಿಂತಿದ್ದಾರೆ. ಬೆಲೆ ಹೆಚ್ಚಳದಿಂದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಮಂದಿ ಕಂಗಾಲಾಗಿದ್ದಾರೆ ಎಂದು ದೂರಿದ ಸೋನಿಯಾ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇಂತಹ ಪರಿಸ್ಥಿತಿ ಇರಲಿಲ್ಲ ಎಂದರು.
ದೇಶವನ್ನು ಛಿದ್ರ ಮಾಡುವಂತಗ ಕೋಮುಶಕ್ತಿಗಳನ್ನು ಅಧಿಕಾರದಿಂದ ದೂರವಿಡಿ ಎಂದು ಜನತೆಯನ್ನು ಎಚ್ಚರಿಸಿದ ಸೋನಿಯಾ- ದೇಶವನ್ನು ಒಡೆಯುವ ಪ್ರಯತ್ನಗಳನ್ನು ಸಂಘ ಪರಿವಾರದ ಘಟಕಗಳು ಮಾಡುತ್ತಿವೆ ಎಂದು ಆಪಾದಿಸಿದರು. ಸೋನಿಯಾ ಅವರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications