ಖ್ಯಾತ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ದುರ್ಮರಣ
ಖ್ಯಾತ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ದುರ್ಮರಣ
ಬಿಜೆಪಿ ಪರ ಪ್ರಚಾರಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ದುರಂತ
ಅಗ್ನಿ ಎವಿಯೇಷನ್ಗೆ ಸೇರಿದ ನಾಲ್ಕು ಆಸನಗಳ ಮಿನಿ ವಿಮಾನ(Cessna-180 single engine aircraft)ದಲ್ಲಿ ಆಂಧ್ರಪ್ರದೇಶದ ಕರೀಂನಗರಕ್ಕೆ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಜಕ್ಕೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಟಿ ಸೌಂದರ್ಯ ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ನಿಧನರಾದವರಲ್ಲಿ ಸೌಂದರ್ಯ ಸೋದರ ಅಮರನಾಥ್ ಕೂಡ ಸೇರಿದ್ದಾರೆ. ನೆಲದಿಂದ ಹಾರುವ ಸಂದರ್ಭದಲ್ಲಿ ವಿಮಾನಕ್ಕೆ ಬೆಂಕಿ ತಗುಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅನಂತಕುಮಾರ್ ತಿಳಿಸಿದ್ದಾರೆ.
ಸೌಂದರ್ಯ ಅವರ ವಿವಾಹ ಕೆಲವು ತಿಂಗಳ ಹಿಂದಷ್ಟೇ ನಡೆದಿತ್ತು . ಕನ್ನಡ ಸೇರಿದಂತೆ ತಮಿಳು, ತೆಲುಗು ಚಿತ್ರರಂಗದಲ್ಲೂ ಹೆಸರು ಮಾಡಿದ್ದ ಸೌಂದರ್ಯ, ಕಳೆದ ವರ್ಷ ಗಿರೀಶ್ ಕಾಸರವಳ್ಳಿ ನಿರ್ದೇಶನದಲ್ಲಿ ದ್ವೀಪ ಎನ್ನುವ ಕನ್ನಡ ಚಿತ್ರ ನಿರ್ಮಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ದ್ವೀಪ ಚಿತ್ರಕ್ಕೆ ಸ್ವರ್ಣ ಕಮಲ ಪ್ರಶಸ್ತಿ ದೊರೆತಿದೆ.
ನಿಧನರಾದವರಲ್ಲಿ ವಿಮಾನದ ಪೈಲಟ್ ಫಿಲಿಪ್ ಕೂಡ ಸೇರಿದ್ದಾನೆ ಎಂದು ರಾಜ್ಯ ಪೊಲೀಸ್ ವರಿಷ್ಠ ಟಿ.ಮಡಿಯಾಳ್ ತಿಳಿಸಿದ್ದಾರೆ.
ಮನೆ ಮನೆ ಮಾತು : 32 ವರ್ಷದ ಸೌಂದರ್ಯ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯ ಸುಮಾರು 60 ಚಿತ್ರಗಳಲ್ಲಿ ನಟಿಸಿದ್ದರು. ಬೆಂಗಳೂರಿನ ಹುಡುಗಿಯಾದರೂ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಅವಕಾಶಗಳನ್ನು ಪಡೆಯದ ಸೌಂದರ್ಯ, ತೆಲುಗು ಚಿತ್ರರಂಗದಲ್ಲಿ ಖ್ಯಾತಿಯ ಉತ್ತುಂಗಕ್ಕೇರಿದ್ದರು. ಕೌಟುಂಬಿಕ ಚಿತ್ರಗಳಲ್ಲಿ ನಟಿಸುವ ಮೂಲಕ ಸೌಂದರ್ಯ ಹೆಂಗಳೆಯರ ಮೆಚ್ಚಿನ ನಟಿಯಾಗಿದ್ದರು. ದ್ವೀಪ, ದೋಣಿ ಸಾಗಲಿ ಹಾಗೂ ಸಿಪಾಯಿ ಸೌಂದರ್ಯ ಅವರಿಗೆ ಕನ್ನಡದಲ್ಲಿ ಹೆಸರು ತಂದುಕೊಟ್ಟಿದ್ದ ಚಿತ್ರಗಳು.
ಸೌಂದರ್ಯ ಅವರ ಸಾವಿನ ಸುದ್ದಿ ತಿಳಿದ ತಕ್ಷಣ , ಚುನಾವಣಾ ಪ್ರಚಾರದಲ್ಲಿದ್ದ ಮುಖ್ಯಮಂತ್ರಿ ಎಸ್ಸೆಂ. ಕೃಷ್ಣ ಹಾಗೂ ಬಿಜೆಪಿ ಅಧ್ಯಕ್ಷ ಅನಂತಕುಮಾರ್ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications