ಸಾತನೂರಲ್ಲಿ ಜಾತ್ಯತೀತ ದಳ ಕಾರ್ಯಕರ್ತನ ಮೇಲೆ ಆ್ಯಸಿಡ್ ದಾಳಿ
ಸಾತನೂರಲ್ಲಿ ಜಾತ್ಯತೀತ ದಳ ಕಾರ್ಯಕರ್ತನ ಮೇಲೆ ಆ್ಯಸಿಡ್ ದಾಳಿ
ಆರೋಪ ಪ್ರತ್ಯಾರೋಪದಲ್ಲಿ ಮುಳುಗಿದ ದೇವೇಗೌಡ-ಶಿವಕುಮಾರ್
ಆ್ಯಸಿಡ್ ದಾಳಿಯಲ್ಲಿ ಮಾದೇಶ್ ಅವರ ಕೈ, ಭುಜ, ಬೆನ್ನು ಹಾಗೂ ಕಾಲುಗಳು ತೀವ್ರವಾಗಿ ಸುಟ್ಟಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತ್ನಿ ಲಕ್ಷ್ಮಮ್ಮ, ತಂದೆ ಮಾದೇವಯ್ಯ ಅವರಿಗೂ ಸಣ್ನಪುಟ್ಟ ಗಾಯಗಳಾಗಿವೆ. ತಾಯಿ ಪುಟ್ಟಮ್ಮ ಹಾಗೂ ನಾಲ್ವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ನಗರಾಭಿವೃದ್ಧಿ ಸಚಿವ ಹಾಗೂ ಸಾತನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್, ಮತ್ತವರ ಬೆಂಬಲಿಗರು ಈ ಅಮಾನವೀಯ ಕೃತ್ಯವೆಸಗಿದ್ದಾರೆಂದು ಜಾತ್ಯತೀತ ಜನತಾದಳದ ಅಧ್ಯಕ್ಷ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಹಿನ್ನೆಲೆ: ಚುನಾವಣೆ ಸಂಬಂಧ ಮಾದೇಶ್ ಹಾಗೂ ಕಾಂಗ್ರೆಸ್ನ ಶಿವನಂಜೇಗೌಡ ಎಂಬುವರ ಮಧ್ಯೆ ಏಪ್ರಿಲ್ 18ರ ಮಧ್ಯ ರಾತ್ರಿ ಮಾತಿಗೆ ಮಾತು ಬೆಳೆದು ಜಗಳವಾಗಿತ್ತು. ಹಣ ಮತ್ತು ಹೆಂಡ ವಿತರಣೆ ಮಾಡುತ್ತಿದುದನ್ನು ವಿರೋಧಿಸಿದ ಮಾದೇಶ್ ಮೇಲೆ ಶಿವನಂಜೇಗೌಡ ಮತ್ತು ಆತನ ಬೆಂಬಲಿಗರು ಹಲ್ಲೆ ಮಾಡಿದ್ದರು.
ಅಷ್ಟಕ್ಕೂ ಜಗಳ ಮುಗಿಸದ ದುಷ್ಕರ್ಮಿಗಳು ಮಾದೇಶ್ ತೋಟದ ಮನೆಯಲ್ಲಿ ಮಲಗಿದ್ದಾಗ ಮನೆಯ ಹೊರಗಿನಿಂದ ಬೀಗ ಹಾಕಿ, ಮನೆಯ ಹೆಂಚು ತೆಗೆದು ಟಾರ್ಚ್ ಸಹಾಯದಿಂದ ಮಾದೇಶ್ ಮಲಗಿರುವ ಜಾಗ ಗುರ್ತಿಸಿ, ಆ್ಯಸಿಡ್ ತುಂಬಿದ ಬಾಟಲಿಯನ್ನು ಎಸೆದಿದ್ದಾರೆ. ನಂತರ ಮನೆಯಾಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಮಾದೇಶನ ಕಿರುಚಾಟ ಕೇಳಿದ ನೆರೆಹೊರೆಯವರು ಬಾಗಿಲು ಮುರಿದು ಬಂದು ಒಳಗಿದ್ದವರನ್ನು ರಕ್ಷಿಸಿದ್ದಾರೆ. ಸ್ವಲ್ಪ ತಡವಾದರೂ ಇಡೀ ಕುಟುಂಬವೇ ಸಜೀವದಹನವಾಗಿಬಿಡುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದೆಲ್ಲ ಡ್ರಾಮಾ ಮಾಸ್ಟರ್ ದೇವೇಗೌಡರ ಗಿಮಿಕ್ಕು: ಕೋಡಿಹಳ್ಳಿಯಲ್ಲಿ ನಡೆದಿರುವ ಈ ಆ್ಯಸಿಡ್ ದಾಳಿ ಡ್ರಾಮಾ ಮಾಸ್ಟರ್ ದೇವೇಗೌಡ ಕೃಪಾಪೋಷಿತ ನಾಟಕ ಮಂಡಳಿಯ ಸೃಷ್ಟಿ ಎಂದು ಸಚಿವ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಅಶಾಂತಿ ಸೃಷ್ಟಿಸುವ ಮೂಲಕ ಕಾನೂನುಭಂಗ ಮಾಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರನ್ನು ಬಂಧಿಸಬೇಕು ಎಂದೂ ಶಿವಕುಮಾರ್ ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications